ಕೊಪ್ಪಳ: ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದ ವೇಳೆ ಪೊಲೀಸರು ಮತ್ತು ತಹಶಿಲ್ದಾರ್ ಕಾರ್ಯಚರಣೆ ನಡೆಸಿ ಬರೋಬ್ಬರಿ 32 ಲಕ್ಷ ರೂ ಹಣ ವಶಕ್ಕೆ ಪಡೆದಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕಡೆ ಬಾಗಿಲು ಚೆಕ್ಪೋಸ್ಟ್ ನಲ್ಲಿ ವಶಪಡಿಸಿಕೊಳ್ಳಲಾಗಿದ್ದು,
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ನಡುವಿ ಗ್ರಾಮದಿಂದ ಹೊಸಪೇಟೆಗೆ ಸಾಗಿಸುತ್ತಿದ್ದಾಗ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಗಂಗಾವತಿ ತಹಶಿಲ್ದಾರ್ ಯು ನಾಗರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಪೀರಸಾಬ ಎನ್ನುವರು ಕಾರಿನಲ್ಲಿ ಹಣ ಸಾಗಿಸುತ್ತಿದ್ದು,
ಪರಿಶೀಲನೆ ವೇಳೆ ಸಿಕ್ಕಿ ಬಿದ್ದಿದ್ದಾರೆ. ಹಣ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು, ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.