ಹುಣಸೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹುಣಸೂರು-೨ ಯೋಜನಾ ಕಚೇರಿ ವ್ಯಾಪ್ತಿಯ ಬಿಳಿಕೆರೆ ಹೋಬಳಿ ಹಂದನಹಳ್ಳಿಯಲ್ಲಿ ಒಕ್ಕೂಟ ಪದಗ್ರಹಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕ ಎಚ್.ಎಲ್.ಮುರಳಿಧರ್ ಮಾತನಾಡಿ ಧರ್ಮಾಧಿಕಾರಿ ಡಾ.ವೀರೇಂದ್ರಹೆಗ್ಗಡೆಯವರು ಗ್ರಾಮೀಣ ಭಾಗದ ಮಹಿಳೆಯರಲ್ಲಿ ಸ್ವಾವಲಂಬನೆ, ಸ್ವಾಭಿಮಾನ, ಸಂಘಟನೆ, ಆರ್ಥಿಕ ಅಭಿವೃದ್ಧಿ, ಶಿಸ್ತು ಮೂಡಿಸಬೇಕೆಂದು ಉದ್ದೇಶದಿಂದ ಸಂಘಟನೆಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯುತ್ತಿದೆ.
ಈ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆವತಿಯಿಂದ ಹತ್ತು ವರ್ಷಗಳಿಂದ ಮಹಿಳಾ ಸ್ವಸಹಾಯ ಸಂಘಟನೆ ಮಾಡಿದು,್ದ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಸಾಮಾಜಿಕ ಕಾರ್ಯಗಳನ್ನು ನಡೆಸಿ, ಗ್ರಾಮೀಣರಿಗೆ ನೆರವಾಗುತ್ತಿದೆ. ಇದಕ್ಕೆ ಸಹಕಾರ ನೀಡಿದ ಎಲ್ಲರನ್ನು ಅಭಿನಂದಿಸುವುದಾಗಿ ತಿಳಿಸಿದರು. ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಹಂದನಹಳ್ಳಿ ಸೋಮಶೇಖರ್ ಮಾತನಾಡಿ,
“ದೀರ್ಘಕಾಲದ ಬೆನ್ನು ನೋವು” ಇಲ್ಲಿದೆ ಸರಳ ಚಿಕಿತ್ಸೆ: ಪರಿಹಾರ, ಉಚಿತ ಸಲಹೆ
ಯೋಜನೆವತಿಯಿಂದ ಸ್ವಸಹಾಯ ಸಂಘದ ಮಕ್ಕಳಿಗೆ ವಿದ್ಯಾರ್ಥಿವೇತನ, ನಿರ್ಗತಿಕರಿಗೆ ಮಾಶಾಸನ,ಸವಲತ್ತು ಕೊಡುಗೆಯಾಗಿ ನೀಡುತ್ತಿದೆ ಅಲ್ಲದೆ ಸ್ಥಳೀಯವಾಗಿ ಸಮುದಾಯದ ಕಾರ್ಯಕ್ರಮಗಳಾದ ದೇವಸ್ಥಾನ ಜೀರ್ಣೋದ್ಧಾರ, ಶಾಲೆಗಳಲ್ಲಿ ಶಿಕ್ಷಕರ ನಿಯೋಜನೆ, ಹಾಲಿನ ಡೇರಿ ಅಭಿವೃದ್ದಿಗೆ ನೆರವು ನೀಡಲಾಗುತ್ತಿದೆ. ಸ್ವಸಹಾಯ ಸಂಘದ ಸದಸ್ಯರು ಮತ್ತು ಗ್ರಾಮೀಣ ಭಾಗದ ಜನರು ಯೋಜನೆವತಿಯಿಂದ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದು ಅಭಿವೃದ್ಧಿ ಹೊಂದಿರೆAದರು.
ನೂತನವಾಗಿ ಆಯ್ಕೆಯಾದ ಒಕ್ಕೂಟದ ಪದಾಧಿಕಾರಿಗಳಿಗೆ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಹಂದನಹಳ್ಳಿಸೋಮಶೇಖರ್, ತಾಲೂಕು ಯೋಜನಾಧಿಕಾರಿ ಧನಂಜಯ್ ದಾಖಲಾತಿ ಹಾಗೂ ಅಧಿಕಾರ ಹಸ್ತಾಂತರಿಸಿದರು. ಕಾರ್ಯಕ್ರಮದ ಅಂಗವಾಗಿ ಸಂಘದ ಸದಸ್ಯರುಗಳಿಗೆ ವಿವಿಧ ಕ್ರೀಡೆಗಳನ್ನು ಆಯೋಜಿಸಿ ಬಹುಮಾನ ವಿತರಿಸÀಲಾಯಿತು. ಮುಖಂಡರಾದ ಸಿದ್ದನಾಯಕ, ಶೋಭಾ, ಮೇಲ್ವಿಚಾರಕರಾದ ವೀಣಾ, ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಹಾಗೂ ಸದಸ್ಯರು ಬಾಗವಹಿಸಿದ್ದರು.