ಮೈಸೂರು: ಇಲ್ಲಿನ ಸಿದ್ದಾರ್ಥ ನಗರದಲ್ಲಿರುವ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಗಳಾದ ಶಿವಾನಂದ ಸ್ವಾಮೀಜಿ (90) ಅವರ ಹತ್ಯೆಯಾಗಿದೆ. ಮಠದ ಆವರಣದಲ್ಲೇ ಸ್ವಾಮೀಜಿಯವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾ ಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸ್ವಾಮೀಜಿಯವರ ಆಪ್ತನಾಗಿದ್ದ ರವಿ ಎಂಬಾತನೇ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ. ಮೈಸೂರಿನ ನಜಾರಾಬಾದ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿದ್ದು, ತನಿಖೆ ನಡೆಸಿದ್ದಾರೆ.
ಆರೋಪಿ ರವಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಸ್ವಾಮೀಜಿಯವರನ್ನು ಮಠದ ಆವರಣದಲ್ಲೇ ಹತ್ಯೆ ಮಾಡಿದ್ದಾನೆನ್ನಲಾಗಿದೆ. ಮಂಚದ ಮೇಲೆ ಮಲಗಿದ ಸ್ಥಿತಿಯಲ್ಲೇ ಸ್ವಾಮೀಜಿಯವರ ಶವ ಕಂಡುಬಂದಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಮೋಲ್ನೋಟಕ್ಕೆ ಇದು ಆಸ್ತಿ ವಿಚಾರವಾಗಿ ಸ್ವಾಮೀಜಿ ಹಾಗೂ ರವಿ ನಡುವೆ ಇದ್ದ ಮನಸ್ತಾಪವೇ ಕೊಲೆಗೆ ಕಾರಣ ಎನ್ನಲಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
Ginger Side Effects: ಅತಿಯಾದ ಶುಂಠಿ ಸೇವನೆಯಿಂದ ಏನೆಲ್ಲಾ ಅಡ್ಡ ಪರಿಣಾಮಗಳಾಗುತ್ತೆ ಗೊತ್ತಾ..?
ಕೊಲೆಯ ನಂತರ ರವಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ ಎನ್ನಲಾಗಿದೆ. ಮದ್ಯ ಸೇವಿಸಿ ಆನಂತರ ವಿಷ ಕುಡಿದಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಆತನನ್ನು ವಶಕ್ಕೆ ಪಡೆಯುವ ಹೊತ್ತಿಗೆ ಆಗಲೇ ನಿತ್ರಾಣನಾಗಿದ್ದ. ಹಾಗಾಗಿ, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)