ಬೆಂಗಳೂರು:- ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿದ್ದ ಯುವಕನಿಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ ನೀಡಲಾಗಿದೆ.
Gruha Lakshmi Scheme: ಗೃಹಲಕ್ಷ್ಮಿ ಹಣ ಇನ್ನೂ ಬಂದಿಲ್ವಾ!?, ಇವತ್ತೆ ನಿಮ್ಮ ಖಾತೆ ಚೆಕ್ ಮಾಡಿ!
19 ವರ್ಷದ ಯುವಕನಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎನ್ನಲಾಗಿದೆ. ಈ ಕುರಿತು ಮಾತನಾಡಿದ ಫೋರ್ಟಿಸ್ ಆಸ್ಪತ್ರೆಯ ನರಶಸ್ತ್ರ ಚಿಕಿತ್ಸಾ ವಿಭಾಗದ ಹೆಚ್ಚುವರಿ ನಿರ್ದೇಶಕ ರಘುರಾಮ್ ಜಿ, ‘19 ವರ್ಷದ ರಾಜ್ ಎಂಬುವವರು ಹುಳಿಮಾವು ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಫುಟ್ಪಾತ್ಗೆ ಕಾರು ಡಿಕ್ಕಿಯಾದ ಪರಿಣಾಮ ಹಿಂಬದಿ ಕುಳಿತಿದ್ದ ಇವರ ತಲೆ, ಕೈಗೆ ತೀವ್ರವಾಗಿ ಪೆಟ್ಟಾಗಿತ್ತು. ಅಪಘಾತದ ತೀವ್ರತೆಯಿಂದಾಗಿ ಇವರ ಬಲಗೈ ಮೂಳೆ ಮುರಿದು, ತಲೆಗೆ ತೀವ್ರವಾಗಿ ಗಾಯವಾಗಿ ಕಿವಿಯಿಂದ ರಕ್ತಸ್ತ್ರಾವವಾಗಿತ್ತು. ಇದರಿಂದ ಅವರು ಪ್ರಜ್ಞೆಕಳೆದುಕೊಂಡಿದ್ದರು.
ಕೂಡಲೇ ಅವರನ್ನು ಫೋರ್ಟಿಸ್ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ಕರೆತರಲಾಯಿತು. ತಕ್ಷಣ ನಮ್ಮ ವೈದ್ಯರ ತಂಡ ಅವರನ್ನು ಎಂಆರ್ಐಗೆ ಒಳಪಡಿಸಲಾಯಿತು. ಅವರಿಗೆ ಮೆದುಳಿನ ಕೋಶಗಳ ನಡುವೆ ಸಂಪರ್ಕ ಕಲ್ಪಿಸುವ ನರಗಳಲ್ಲಿ ರಕ್ತಸ್ರಾವ ಆಗಿರುವುದು ಕಂಡು ಬಂತು. ಇದನ್ನು ಆಕ್ಸಾನಲ್ ಗಾಯ ಎನ್ನಲಾಗುತ್ತದೆ. ಈ ಗಾಯದಿಂದ ಅವರು ಮಾತನಾಡುವ ಹಾಗೂ ಚಲಿಸುವ ಸಾಮರ್ಥ್ಯವನ್ನು ಕಳೆದುಕೊಳ್ಳುವ ಸಂಭವವಿರುತ್ತದೆ. ಹೀಗಾಗಿ ಅವರಿಗೆ ಕೂಡಲೇ ತುರ್ತು ಚಿಕಿತ್ಸೆಯನ್ನು ನೀಡಲಾಯಿತು.
ನ್ಯೂರೋ ತಂಡವು ಅವರ ಮಾತಿನ ತೊಂದರೆ, ಮೆಮೊರಿ ಸಮಸ್ಯೆಯನ್ನು ಪರಿಸರಿಸುವ ನಿಟ್ಟಿನಲ್ಲಿ ಚಿಕಿತ್ಸೆ ನೀಡಿದರು. ಆರಂಭಿಕ ಚಿಕಿತ್ಸೆಯ ನಂತರ, ಫಿಸಿಯೋಥೆರಪಿ ಮತ್ತು ಸ್ಪೀಚ್ ಥೆರಪಿ ನೀಡಲಾಗುತ್ತಿದೆ ಎಂದರು.