ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣವು ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಪ್ರಕರಣ ಮುಂದುವರೆದಂತೆ ರೇಣುಕಾ ಸ್ವಾಮಿಯನ್ನು ದರ್ಶನ್ ಹಾಗೂ ಗ್ಯಾಂಗ್ ಹೇಗೆಲ್ಲ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂಬ ಅಂಶಗಳು ಬಹಿರಂಗವಾಗುತ್ತಿವೆ. ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷಾ ವರದಿ ಬಂದಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಯಲು ಆಗಿದೆ.
ರೇಣುಕಾಸ್ವಾಮಿ ದೇಹದ 34 ಕಡೆ ಗಂಭೀರ ಗಾಯವಾಗಿದೆ ಎಂದು ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಉಲ್ಲೇಖವಾಗಿದೆ. ಪಕ್ಕೆಲುಬು ಮುರಿದು ಶ್ವಾಸಕೋಶಕ್ಕೆ ಮೂಳೆ ಚುಚ್ಚಿಕೊಂಡಿತ್ತು. ಕಾಲಿನಿಂದ ಒದ್ದು ರೇಣುಕಾಸ್ವಾಮಿ ಎದೆಗೆ ಹೊಡೆದಿರೋದು ಪತ್ತೆಯಾಗಿದ್ದು, ಆರೋಪಿಗಳ ಹೊಡೆತಕ್ಕೆ ದೇಹದ ಹಲವೆಡೆ ರಕ್ತ ಹೆಪ್ಪುಗಟ್ಟಿತ್ತು.
Father’s Day 2024: ಅಪ್ಪಂದಿರ ದಿನದ ಮಹತ್ವ ಪ್ರಾಮುಖ್ಯತೆ ಮತ್ತು ಇತಿಹಾಸ ತಿಳಿಯಿರಿ!
ಮರ್ಮಾಂಗಕ್ಕೂ ಬಲವಾದ ಪೆಟ್ಟು ಬಿದ್ದಿದೆ ವರದಿಯಲ್ಲಿ ಉಲ್ಲೇಖವಾಗಿದೆ. ಇನ್ನೂ ರೇಣುಕಾಸ್ವಾಮಿಗೆ ವಿದ್ಯುತ್ ಶಾಕ್ ನೀಡಿರುವುದು ಕೂಡ ಬಯಲು ಆಗಿದ್ದು, ರ್ಶನ್ ವಿಚಾರವಾಗಿ ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಲಾಗುತ್ತಿದ್ದು, ಹೆಚ್ಚಿನ ಸಾಕ್ಷ್ಯಗಳನ್ನ ಸಂಗ್ರಹಿಸಲು ಇಂಚಿಂಚೂ ಪರಿಶೀಲನೆ ನಡೆಸಲಾಗುತ್ತಿದೆ. ಇದೀಗ ದರ್ಶನ್ ಗ್ಯಾಂಗ್ ರಕ್ಕಸ ಕೃತ್ಯ ಮರಣೋತ್ತರ ವರದಿಯಿಂದ ಬಯಲು ಆಗಿದೆ.