ಹಾಸನ:- ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಕೇಸ್ ಗೆ ಸಂಬಧಪಟ್ಟಂತೆ ಮಗ ಸೂರಜ್ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಚೀನಾದ ಗುವಾಂಗ್ಡಾಂಗ್ ಪ್ರಾಂತ್ಯದಲ್ಲಿ ಹೆದ್ದಾರಿ ಕುಸಿತ – 48 ಮಂದಿ ಸಾವು..!
ಈ ಸಂಬಂಧ ಮಾತನಾಡಿದ ಅವರು,ರೇವಣ್ಣ ಅವರು ಏನೆಂದು ನಮ್ಮ ಜಿಲ್ಲೆಯ ಜನರಿಗೆ ಗೊತ್ತಿದೆ. ತಾಲೂಕಿನ ಜನರಿಗೆ ಗೊತ್ತಿದೆ. ಅಂತಹ ವಿಚಾರಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎನ್ನುವ ಮೂಲಕ ತಮ್ಮ ಕುಟುಂಬದ ವಿರುದ್ಧದ ಆರೋಪಗಳ ಬಗ್ಗೆ ಕಿಡಿ ಕಾರಿದರು.
ರಾಜಕೀಯ ದುರುದ್ದೇಶದಿಂದ ಯಾರು ಏನು ಬೇಕಾದರೂ ಮಾಡುತ್ತಾರೆ. ಜಿಲ್ಲೆಯ ರಾಜಕಾರಣದಲ್ಲಿ ರೇವಣ್ಣ ಅವರಿಗೆ ಪ್ರತಿರೋಧ ಅಥವಾ ಪ್ರತಿಸ್ಪರ್ಧಿ ಇಲ್ಲ. ಅವರ ರೀತಿ ರಾಜಕಾರಣ ಮಾಡಿದವರು ಇಲ್ಲ. ಅವರನ್ನು ಸಿಲುಕಿಸಬೇಕು, ದುರ್ಬಲ ಮಾಡಬೇಕು ಎಂದು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಹೇಳಿ ತಂದೆ ಪರ ಬ್ಯಾಟಿಂಗ್ ಮಾಡಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕಳೆದ ಜನವರಿಯಲ್ಲಿ ಅನುದಾನದ ವಿಚಾರದ ಬಗ್ಗೆ ಭೇಟಿ ಮಾಡಿದ್ದೆ. ನಾನು ಈ ಜಿಲ್ಲೆಯ ಜನಪ್ರತಿನಿಧಿಯಾಗಿದ್ದೇನೆ. ನಾನು ಭೇಟಿಯಾಗಿದ್ದನ್ನು ನೀವೇ ಚಿತ್ರಿಕರಿಸಿದ್ದೀರಿ. ಒಂದೂವರೆ ತಿಂಗಳಿನಿಂದ ಚುನಾವಣೆ ಹಿನ್ನೆಲೆಯಲ್ಲಿ ಬ್ಯುಸಿ ಇದ್ದೆ. ಇವತ್ತಿನವರೆಗೂ ಬೆಂಗಳೂರಿಗೆ ಹೋಗಿಲ್ಲ. ಹಾಗಿದ್ದಾಗ ಡಿ.ಕೆ.ಶಿವಕುಮಾರ್ ಅವರನ್ನಾಗಲೀ, ಯಾವುದೇ ರಾಜಕಾರಣಿಯನ್ನು ಭೇಟಿ ಮಾಡುವ ಸಂದರ್ಭ ಹೇಗೆ ಬರಲಿದೆ ಎಂದು ಪ್ರಶ್ನಿಸಿದರು.
ನಮ್ಮ ಕ್ಷೇತ್ರ, ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಹಿಂದೆ ಸೌಹಾರ್ದಯುತವಾಗಿ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು ನಿಜ. ಆಗಲೂ ರೇವಣ್ಣ ಕುಟುಂಬ ಕಾಂಗ್ರೆಸ್ಗೆ ಹೋಗಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಸೃಷ್ಟಿ ಮಾಡಲಾಗಿತ್ತು. ಈ ಊಹಾಪೋಹಗಳನ್ನೆಲ್ಲಾ ಬಿಟ್ಟುಬಿಡಿ ಎಂದು ಮನವಿ ಮಾಡಿದರು