ಬೆಂಗಳೂರು:- ಬಿಜೆಪಿ ಸರ್ಕಾರ ಮತ್ತೊಮ್ಮೆ ಬರಬೇಕು ಎಂಬುವುದನ್ನು ಶಾಮನೂರು ಸೂಕ್ಷ್ಮವಾಗಿ ಹೇಳಿದ್ದಾರೆ ಎಂದು ಮಾಜಿ ಶಾಸಕ ಸಿ.ಟಿ ರವಿ ಹೇಳಿಕೆ ನೀಡಿದ್ದಾರೆ.
ಬಿ.ವೈ ರಾಘವೇಂದ್ರ ಅವರನ್ನು ಗೆಲ್ಲಿಸಬೇಕು ಎನ್ನುವ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು. ಶಾಮನೂರು ಶಿವಶಂಕರಪ್ಪನವರು ದೇಶಕ್ಕೆ ಒಂದೊಳ್ಳೆ ಸಂದೇಶ ಕೊಟ್ಟಿದ್ದಾರೆ. ದೇಶದ ಹಿತದೃಷ್ಟಿಯಿಂದ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರಬೇಕು ಎಂಬ ಸಂದೇಶ ಕೊಟ್ಟಿದ್ದಾರೆ. ಅವರ ಹೇಳಿಕೆಯನ್ನ ಸ್ವಾಗತ ಮಾಡ್ತೀನಿ ಎಂದಿದ್ದಾರೆ.
ಶಾಮನೂರು ಅವರು ಮೋದಿಯನ್ನು ಒಪ್ಪಿದ್ದಾರೆ. ಮತ್ತೆ ಮೋದಿ ಪ್ರಧಾನಿ ಆಗಲಿ ಎಂಬುದನ್ನ ಪರೋಕ್ಷವಾಗಿ ಮತ್ತು ಅಷ್ಟೇ ಸೂಕ್ಮವಾಗಿ ಹೇಳಿದ್ದಾರೆ. ಶಾಮನೂರು ಅವರ ಹೇಳಿಕೆಯಂತೆ ಮೋದಿಗೆ ಎಲ್ಲರೂ ಮತ ಹಾಕಬೇಕು, ಬಿಜೆಪಿಯನ್ನ ಗೆಲ್ಲಿಸಬೇಕು. ಅಭಿವೃದ್ಧಿ ಆಗಬೇಕು ಎಂದರೆ ಮೋದಿ ಬೇಕು. ಹಾಗಾಗಿ ಪ್ರತಿಯೊಬ್ಬರೂ ಬಿಜೆಪಿಗೆ ಮತ ಹಾಕಿ, ಮೋದಿಯನ್ನ ಮತ್ತೊಮ್ಮೆ ಪ್ರಧಾನಿ ಮಾಡಿ ಎಂದು ಮನವಿ ಮಾಡಿದ್ದಾರೆ.
ಲಕ್ಷ್ಮಣ ಸವದಿ ಸಹ ಬಿಜೆಪಿಗೆ ಬರ್ತಾರಾ ಅನ್ನೋ ಹೇಳಿಗೆ ಪ್ರತಿಕ್ರಿಯಿಸಿ, ಲಕ್ಷ್ಮಣ ಸವದಿ ಜೊತೆಗೆ ಸ್ನೇಹ ಇದೆ. ಅವರು ನಮ್ಮ ಪಕ್ಷವನ್ನ ಬಿಟ್ಟಿದ್ದಾರೆಯೇ ಹೊರತು ಸ್ನೇಹ ಬಿಟ್ಟಿಲ್ಲ. ಅವರು ಪಾರ್ಟಿ ಬಿಡುವಾಗ, ಬೇಡ ಎಂದು ಹೇಳಿದ್ದೆ. ಮುಂದೆ ಅವರಿಗೆ ಪಶ್ಚಾತಾಪಾ ಆದಾಗ, ಕಾಲ ಕೂಡಿಬಂದಾಗ ಅವರೇ ಬರಬಹುದು ಎಂದು ಹೇಳಿದ್ದಾರೆ