ಬೆಂಗಳೂರು:- ರೈತನಿಗೆ ಅವಮಾನ ಹಿನ್ನೆಲೆ ಬೆಂಗಳೂರಿನ GT ವರ್ಲ್ಡ್ ಮಾಲ್ ವಿರುದ್ಧ FIR ದಾಖಲು ಮಾಡಲಾಗಿದೆ.
Rain News: ಇಂದು ಕರ್ನಾಟಕದ ಹಲವೆಡೆ ಭಾರೀ ಮಳೆ: ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹ ಭೀತಿ!
ಪಂಚೆ ಧರಿಸಿದ್ದಾರೆ ಎಂಬ ಕಾರಣದಿಂದ ಮಾಲ್ ಒಳಗೆ ಬಿಡದೆ ಕಾಯಿಸಿ ಹಾವೇರಿಯ ರೈತರನ್ನು ಅವಮಾನ ಮಾಡಿದ ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್ನ ಸಿಬ್ಬಂದಿಯ ವರ್ತನೆಗೆ ರಾಜ್ಯದ ಸಚಿವರುಗಳು ಗರಂ ಆಗಿದ್ದಾರೆ. ಈ ಬಗ್ಗೆ ಪೊಲೀಸ್ ನೋಟೀಸ್ ನೀಡುವ ಸೂಚನೆ ನೀಡಿದ್ದಾರೆ. ಇದೀಗ ಜಿಟಿ ಮಾಲ್ ಮಾಲ್ ಸಿಬ್ಬಂದಿ ಹಾಗೂ ಆಡಳಿತ ಮಂಡಳಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ರೈತ ಫಕೀರಪ್ಪ ಅವರಿಗೆ ಅವಮಾನ ಮಾಡಿದ ಜಿಟಿ ಮಾಲ್ ಅಡಳಿತ ಮಂಡಳಿ ಹಾಗೂ ಸಿಬ್ಬಂದಿ ಅರುಣ್ ವಿರುದ್ಧ ಕ್ರಮ ಜರಗಿಸುವಂತೆ ಎಫ್ಐಆರ್ ದಾಖಲಾಗಿದೆ.
ಮಂಗಳವಾರ ಸಂಜೆ ಘಟನೆ ನಡೆದಿತ್ತು. ಹಾವೇರಿಯ ರೈತ ಫಕೀರಪ್ಪ ಅವರು ಪಂಚೆ ಧರಿಸಿ, ಮಗನ ಸಮೇತ ಸಿನಿಮಾ ನೋಡಲು ಬಂದಿದ್ದರು. ʼಪಂಚೆ ಧರಿಸಿ ಮಾಲ್ ಒಳಗೆ ಬರುವಂತಿಲ್ಲʼ ಎಂದು ಸೆಕ್ಯುರಿಟಿ ತಡೆದಿದ್ದರು. ಇದನ್ನು ರೈತರ ಮಗ ಪ್ರಶ್ನಿಸಿದ್ದರು.