ಬೆಂಗಳೂರು: ವೈ ಎಸ್ ಶರ್ಮಿಲಾ ರೆಡ್ಡಿ ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿದರು. ದಿಢೀರ್ ಭೇಟಿಗೆ ಕಾರಣವೇನು ಅನ್ನೋದು ಇನ್ನೂ ಗೊತ್ತಿಲ್ಲ. ಆಂಧ್ರಪ್ರದೇಶದಲ್ಲಿ ತಮ್ಮ ಸಹೋದರನ ವಿರುದ್ಧ ಒಂದು ದೊಡ್ಡ ಶಕ್ತಿಯಾಗಿ ಬೆಳೆದಿರುವ ಶರ್ಮಿಳಾ ಇದೇ ವರ್ಷ ಜನವರಿ ತಿಂಗಳು ಮೊದಲ ವಾರದಲ್ಲಿ ರಾಹುಲ್ ಗಾಂಧಿಯವರ ಸಮ್ಮುಖ ಕಾಂಗ್ರೆಸ್ ಪಕ್ಷ ಸೇರಿದ್ದರು.
ಕಾಫಿ ಪ್ರಿಯರಿಗೆ ಗುಡ್ ನ್ಯೂಸ್..! ಪ್ರತಿದಿನ 3 ಕಪ್ ಫಿಲ್ಟರ್ ಕಾಫಿ ಕುಡಿದರೆ ಡಯಾಬಿಟಿಸ್ ಕಂಟ್ರೋಲ್
ಅವರು ಪಕ್ಷಕ್ಕೆ ಸೇರಿದ ಕೂಡಲೇ ಎಐಸಿಸಿ ಅವರನ್ನು ಆಂದ್ರಪ್ರದೇಶ ಕಾಂಗ್ರೆಸ್ ಘಟಕದ ಉಸ್ತುವಾರಿಯನ್ನು ವಹಿಸಿಕೊಟ್ಟಿತ್ತು. ಕಾಂಗ್ರೆಸ್ ಸೇರುವ ಮೊದಲು ಶರ್ಮಿಳಾ ಯುವಜನ ಶ್ರಮಿಕ ರೈತು ತೆಲಂಗಾಣ ಪಕ್ಷವನ್ನು ಸ್ಥಾಪಿಸಿ ಆಂಧ್ರಪ್ರದೇಶದ ಜೊತೆ ತೆಲಂಗಾಣಲ್ಲೂ ಪಕ್ಷ ಸಂಘಟನೆಯ ಕೆಲಸ ಮಾಡಿದ್ದರು.