ಉತ್ತರಕನ್ನಡ ಜಿಲ್ಲೆಯ ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಮತ್ತು ಚಾಲಕ ಅರ್ಜುನ್ ಶವ ಪತ್ತೆಯಾಗಿದೆ. ಬರೋಬ್ಬರಿ ಮೂರು ತಿಂಗಳ ನಂತರ ಲಾರಿ ಅವಶೇಷ ಪತ್ತೆಯಾಗಿದೆ. ಹೌದು ಗಂಗಾವಳಿ ನದಿಯಲ್ಲಿ ಇಂದು ನಡೆದ ಆರನೇ ದಿನದ ಕಾರ್ಯಾಚರಣೆ ವೇಳೆ ಹಲವು ಅವಶೇಷಗಳು ಪತ್ತೆಯಾಗಿದ್ದವು. ಮುಂಜಾನೆ ಡ್ರೆಜ್ಜಿಂಗ್ ಮಶಿನ್ ಗೆ ಬೃಹತ್ ವಸ್ತು ಸಿಗುತ್ತಿರುವುದು ಪತ್ತೆಯಾಗಿತ್ತು.
ಅಲ್ಲದೆ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಲಾರಿಯ ಬಿಡಿಭಾಗ ಕೂಡ ದೊರೆತಿತ್ತು. ಇದರಿಂದ ಗಂಗಾವಳಿ ನದಿಯಲ್ಲಿ ಡ್ರೆಜ್ಜಿಂಗ್ ಮಶಿನ್ ನಿರಂತರವಾಗಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದು ಇದೀಗ ಭಾರತ್ ಬೆಂಜ್ ಲಾರಿ ಕೂಡ ಸಿಕ್ಕಿದೆ.ಸದ್ಯ ಲಾರಿಯನ್ನು ಬಾರ್ಜ್ನಲ್ಲಿರುವ ಕ್ರೇನ್ ಮೂಲಕ ಮೇಲಕ್ಕೆ ಎತ್ತಿದ್ದು ಲಾರಿ ಮುಂಭಾಗ ಹಾಗೂ ಚಾಲಕನ ಮೃತದೇಹ ಗೋಚರವಾಗಿದೆ.
Urdu is Compulsory: ಇದೇನಿದು ಕರ್ನಾಟಕ ಸರ್ಕಾರದ ಹೊಸ ನಿಯಮ.? ಅಂಗನವಾಡಿ ಉದ್ಯೋಗಕ್ಕೆ ಉರ್ದು ಕಡ್ಡಾಯವಂತೆ!
ಜುಲೈ 16 ರಂದು ಅರ್ಜುನ್ ನಾಪತ್ತೆಯಾಗಿದ್ದರು. ಆ ದಿನ ಬೆಳಿಗ್ಗೆ 8.45 ಕ್ಕೆ ಶಿರೂರಿನಲ್ಲಿ ಭೂಕುಸಿತ ಸಂಭವಿಸಿತ್ತು. ಜುಲೈ 23 ರಂದು ರಾಡಾರ್ ಮತ್ತು ಸೋನಾರ್ ಸಿಗ್ನಲ್ಗಳಲ್ಲಿ ಲಾರಿ ಎಂದು ಶಂಕಿಸಲಾದ ಲೋಹದ ಭಾಗದ ಸಿಗ್ನಲ್ಗಳು ದೊರೆತಿದ್ದವು. ನದಿಯ ಮಧ್ಯದಲ್ಲಿ ಮಣ್ಣಿನ ದಿಬ್ಬದ ಬಳಿ CP 4 ಎಂದು ಗುರುತಿಸಲಾಗಿತ್ತು. ಜುಲೈ 28 ರಂದು ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ಶೋಧ ಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು.