Facebook Twitter Instagram YouTube
    ಕನ್ನಡ     English     తెలుగు
    Wednesday, July 6
    Facebook Twitter Instagram YouTube
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ     English     తెలుగు
    Facebook Twitter Instagram YouTube
    Home » ರಾಮನಗರದಲ್ಲಿ ಡಿ.ಕೆ. ಶಿವಕುಮಾರ್- ಸಿದ್ದರಾಮಯ್ಯ ಜಂಟಿ ಪತ್ರಿಕಾಗೋಷ್ಠಿ

    ರಾಮನಗರದಲ್ಲಿ ಡಿ.ಕೆ. ಶಿವಕುಮಾರ್- ಸಿದ್ದರಾಮಯ್ಯ ಜಂಟಿ ಪತ್ರಿಕಾಗೋಷ್ಠಿ

    ain userBy ain user
    Share
    Facebook Twitter LinkedIn Pinterest Email

    ರಾಮನಗರ: ನ್ಯಾಯಾಲಯದ ಅಭಿಪ್ರಾಯಕ್ಕೆ ಗೌರವ ಕೊಟ್ಟು ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ. ಈ ಹೋರಾಟ ಪೂರ್ಣ ಪ್ರಮಾಣದಲ್ಲಿ ನಿಂತಿಲ್ಲ, ಜನರಿಗೆ ಕುಡಿಯುವ ನೀರು ನೀಡುವ ಬದ್ಧತೆಯನ್ನು ಪಕ್ಷ ಕಾಯ್ದುಕೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಇದೇ ರಾಮನಗರದಿಂದ ಪಾದಯಾತ್ರೆ ಮುಂದುವರಿಸಲಾಗುತ್ತದೆ. ನಿನ್ನೆ ರಾತ್ರಿ ಅಧಿಕಾರಿಗಳು ಬಂದು ಜಿಲ್ಲಾಧಿಕಾರಿಗಳ ಪತ್ರ ಎಂದು ಕೊಡಲು ಬಂದರು. ಜಿಲ್ಲಾಧಿಕಾರಿಗೆ ಕೊವಿಡ್ ಬಂದಿದೆಯಲ್ಲ, ಈಗ ಯಾಕೆ ಬಂದಿದ್ದೀರಿ ಎಂದು ಹೇಳಿ ಕಳುಹಿಸಿದೆ.

    ನಮ್ಮ ಮಾಜಿ ಮೆಯರ್ ಪಿ.ಆರ್ ರಮೇಶ್ ಅವರು ಬೆಳಗ್ಗೆ ಕರೆ ಮಾಡಿ ಬಸವನಗುಡಿಯ ಮೈದಾನದಲ್ಲಿ ಕಾರ್ಯಕ್ರಮಕ್ಕೆ ನೀಡಲಾಗಿದ್ದ ಅನುಮತಿಯನ್ನು ಬಿಬಿಎಂಪಿ ಹಿಂಪಡೆದಿದೆ ಎಂದರು.ನಂತರ ಸರ್ಕಾರದ ನೊಟೀಸ್ ನೋಡಿದೆ. ಅದರಲ್ಲಿ ಪಾದಯಾತ್ರೆ ರದ್ದು ಮಾಡಬೇಕು ಎಂದು ಹೇಳಿದೆ. ಇನ್ನು ನಮ್ಮ ಜಿಲ್ಲಾಧ್ಯಕ್ಷರಿಗೆ ನೀಡಿದ ಅನುಮತಿಯಲ್ಲಿ ಜನರಿಗೆ ತೊಂದರೆಯಾಗದಂತೆ ಪಾದಯಾತ್ರೆ ಮಾಡಿ ಎಂದು ಹೇಳಲಾಗಿತ್ತು. ಪೊಲೀಸರಿಗೆ ಬರೆದ ಪತ್ರದಲ್ಲಿ ವ್ಯವಸ್ಥಿತವಾಗಿ ಅವಕಾಶ ಮಾಡಿಕೊಡಿ ಎಂದೂ ಹೇಳಿತ್ತು. ಆ ಮೂಲಕ ಈ ಪಾದಯಾತ್ರೆ ನಡೆಯಲಿ ಎಂಬ ಆಸೆ ಸರ್ಕಾರಕ್ಕೂ ಇದೆ. ಆದರೂ ನಿಮ್ಮ ಮುಂದೆ ಬೇರೆಯದೇ ಹೇಳುತ್ತಿದ್ದಾರೆ. ಈಗ ಆ ವಿಚಾರ ಬಿಡಿ.

    Demo

    ಈಗ ನಮ್ಮ ಶಾಸಕಾಂಗ ಪಕ್ಷದ ನಾಯಕರು, ಮುಖಂಡರ ಒಟ್ಟಾರೆ ಅಭಿಪ್ರಾಯ, ಜನರ ಭಾವನೆ ಕುರಿತು ನಮ್ಮ ಶಾಸಕರ ಜತೆ ಚರ್ಚೆ ಮಾಡಿದೆವು. ನ್ಯಾಯಾಲಯ ನಮಗೆ ಪಾದಯಾತ್ರೆ ಮಾಡಬೇಡಿ ಎಂದು ಹೇಳದಿದ್ದರೂ ನ್ಯಾಯಾಲಯದ ಅಭಿಪ್ರಾಯಕ್ಕೆ ಗೌರವದಿಂದ ಮನ್ನಣೆ ನೀಡಿ, ನಮ್ಮ ದೇವರುಗಳಾದ ಜನರ ಭಾವನೆ ನೋಡಿ ಈ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡುತ್ತಿದ್ದೇವೆ.

    ಹೆಚ್ಚಿನ ಜನ ಭಾಗವಹಿಸಲು ಅವಕಾಶವಾಗದಿದ್ದರೂ ನಾವಿಬ್ಬರೇ ನಡೆಯಬೇಕು ಎಂದು ಮೊದಲು ಅಂದುಕೊಂಡಿದ್ದೆವು. ನಾವು ಹೋಗುವಾಗ ಜನ ಸೇರುತ್ತಿದ್ದಾರೆ. ಇದರಿಂದ ಮತ್ತೆ ಗುಂಪು ಸೃಷ್ಟಿಯಾಗುತ್ತದೆ. ಕಾಂಗ್ರೆಸ್ ಗೆ ಹೋರಾಟದ ಬದ್ಧತೆ ಇದೆ. ಈ ನೋಟೀಸ್, ಕೇಸ್, ಜೈಲಿಗೆ ನಾವು ಹೆದರುವುದಿಲ್ಲ. ಜನರಿಗೆ ಒಳ್ಳೆಯದಾಗಬೇಕು ಎಂಬುದಷ್ಟೇ ನಮ್ಮ ಉದ್ದೇಶ. ಬಿಜೆಪಿಯವರು ತಮ್ಮ ತಪ್ಪನ್ನು ನಮ್ಮ ಮೇಲೆ ಹಾಕಲು ಪಿತೂರಿ ಮಾಡುತ್ತಿದ್ದಾರೆ. ಈ ಯಾತ್ರೆಯನ್ನು ನಾವು ನಿಲ್ಲಿಸುತ್ತಿಲ್ಲ, ಕೇವಲ ಮುಂದೂಡುತ್ತಿದ್ದೇವೆ. ಮುಂದೆ ಇದೇ ರಾಮನಗರದಿಂದಲೇ ಆರಂಭಿಸುತ್ತೇವೆ. ಇದು ತಾತ್ಕಾಲಿಕ ವಿರಾಮ ಅಷ್ಟೇ.

    ಸರ್ಕಾರಕ್ಕೆ ನ್ಯಾಯ, ಕಾನೂನು ಎಲ್ಲರಿಗೂ ಒಂದೇ ಎಂಬ ಬದ್ಧತೆ ಇದ್ದರೆ, ಕೋವಿಡ್ ಆರಂಭವಾದಾಗಿನಿಂದ ನಿಮ್ಮ ಶಾಸಕರು, ಸಚಿವರು, ಅಧಿಕಾರಿಗಳು ನಿಯಮ ಉಲ್ಲಂಘನೆ ಮಾಡಿದ್ದರೂ, ಧಾರ್ಮಿಕವಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಯಾಕೆ? ಒಬ್ಬರಿಗೆ ಒಂದು ಮತ್ತೊಬ್ಬರಿಗೆ ಇನ್ನೊಂದು ಕಾನೂನು, ನ್ಯಾಯ ಅನ್ವಯ ಆಗುತ್ತದೆಯೇ?. ಈಗಲಾದರೂ ಕಾನೂನು ಉಲ್ಲಂಘನೆ ಮಾಡಿರುವ ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳಿ, ನಿಮ್ಮ ಧೈರ್ಯ ಪ್ರದರ್ಶಿಸಿ.

    ಕೋವಿಡ್ ಗಂಭೀರ ಸ್ಥಿತಿ ತಲುಪಿದಾಗ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಸರ್ಕಾರಕ್ಕೆ ಸಹಕರಿಸಿದೆ. ಅವರಿಗಿಂತ ಹೆಚ್ಚಾಗಿ ಜನರ ಸೇವೆ ಮಾಡಿದೆ. ತರಕಾರಿ ಖರೀದಿ ಮಾಡಿ, ಅದನ್ನು ಜನರಿಗೆ ಉಚಿತವಾಗಿ ಹಂಚಿದ್ದೇವೆ. ಔಷಧಿ, ಹಣ್ಣು, ಆಹಾರ, ದಿನಸಿ, ಆಕ್ಸಿಜನ್ ಕೊಟ್ಟಿದ್ದೇವೆ. ಅಲ್ಪಸಂಖ್ಯಾತರು ಅನಾಥ ಶವಗಳಿಗೆ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಎಲ್ಲ ಧರ್ಮಗಳನ್ನು ಒಟ್ಟಾಗಿ ಕರೆದುಕೊಂಡು ಹೋಗುವುದು ನಮ್ಮ ಧ್ಯೇಯ. ಈ ಹೋರಾಟದಲ್ಲಿ ಮಹಿಳೆಯರು,

    ಮಕ್ಕಳು, ಎಲ್ಲ ವರ್ಗದ ಜನ ಕೊಟ್ಟಿರುವ ಪ್ರೀತಿ ಬೆಂಬಲ ಅಪಾರ. ಅವರಿಗೆ ಶುದ್ಧ ಕುಡಿಯುವ ನೀರು ನೀಡುವುದೇ ನಮ್ಮ ಗುರಿ. ಈ ಹಿಂದೆ ಕಾವೇರಿ ನದಿ ನೀರಿಗಾಗಿ ತಮಿಳುನಾಡು ವಿರುದ್ಧ ಹೋರಾಡುತ್ತಿದ್ದೆವು. ಆದರೆ ಈಗ ನಮ್ಮದೇ ರಾಜ್ಯದ ಎರಡು ಪಕ್ಷಗಳ ವಿರುದ್ಧ ಹೋರಾಡಬೇಕಾದ ಪರಿಸ್ಥಿತಿ ಬಂದಿದೆ. ಅವರಿಂದ ಜನರ ರಕ್ಷಣೆ ಮಾಡಬೇಕಾಗಿದೆ. ಜನರಿಗೆ ಕಾವೇರಿ ಕುಡಿಯುವ ನೀರು ನೀಡುವುದು ನಮ್ಮ ಗುರಿ. ಅದಕ್ಕೆ ನಮ್ಮ ಹೋರಾಟ ಮುಂದುವರಿಯಲಿದೆ.

    ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ:

    ಈ ಪಾದಯಾತ್ರೆಗೆ ಜನಸಾಮಾನ್ಯರು ಬಹಳ ಉತ್ಸಾಹದಿಂದ ಭಾಗವಹಿಸಿ ಅಭೂತಪೂರ್ವ ಯಶಸ್ಸು ತಂದುಕೊಟ್ಟಿದ್ದಾರೆ. ಈ ಪಾದಯಾತ್ರೆ ಹೋರಾಟ ಮಾಡಬೇಕು ಎಂದು ಬಹಳ ಹಿಂದೆಯೇ ತೀರ್ಮಾನ ಮಾಡಿದ್ದೆವು. ಈ ಬಗ್ಗೆ ಬೆಳಗಾವಿ ಅಧಿವೇಶನ ಸಂದರ್ಭದಲ್ಲೂ ಮಾಹಿತಿ ನೀಡಿದೆವು. ಅದರಂತೆ ಜ. 9 ರಂದು ಸಂಗಮದಿಂದ ಪಾದಯಾತ್ರೆ ಆರಂಭಿಸಿ ರಾಮನಗರದವರೆಗೂ ನಾಯಕರು, ಕಾರ್ಯಕರ್ತರು ಯಶಸ್ವಿಯಾಗಿ ಪಾದಯಾತ್ರೆ ಮಾಡಿದ್ದೇವೆ. ಇಂದು 5ನೇ ದಿನ ರಾಮನಗರದಿಂದ ಆರಂಭವಾಗಬೇಕಿತ್ತು.

    ಆದರೆ ಕೋವಿಡ್ 3ನೇ ಅಲೆ ವೇಗವಾಗಿ ಹರಡುತ್ತಿದೆ. ನಿನ್ನೆ 15 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ತಗಲಿದ್ದು, ಜವಾಬ್ದಾರಿಯುತ ಪಕ್ಷವಾಗಿ ನಾವು ಇದಕ್ಕೆ ಸ್ಪಂದಿಸಬೇಕಾಗಿದೆ. ಸೋಂಕು ವೇಗವಾಗಿ ಹರಡಲು ಕಾಂಗ್ರೆಸ್ ಕಾರಣವಲ್ಲ, ಬಿಜೆಪಿಯವರೆ ಕಾರಣ. 3ನೇ ಅಲೆ ಪ್ರಾರಂಭವಾದ ನಂತರ ಸಿಎಂ ಸಭೆ ಮಾಡುವುದನ್ನು ನಿಲ್ಲಿಸಲಿಲ್ಲ. ಜ.6ರಂದು ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ 5-6 ಸಾವಿರ ಜನರನ್ನು ಸೇರಿಸಿ, ಮುಖ್ಯಮಂತ್ರಿ ಸೇರಿದಂತೆ ಅನೇಕ ಮಂತ್ರಿಗಳು ಭಾಗವಹಿಸಿದ್ದರು.

    ನಂತರ ಬಿಜೆಪಿ ಶಾಸಕ ಸುಭಾಷ್ ಗುತ್ತೆದಾರ್ ಪ್ರತಿಭಟನೆ ಮಾಡಿದರು, ರೇಣುಕಾಚಾರ್ಯ ಅವರು ಜಾತ್ರೆ ಮಾಡಿದರು, ಕೇಂದ್ರ ಸಚಿವರು 2ನೇ ಅಲೆ ಸಮಯದಲ್ಲಿ ಕೋವಿಡ್ ನಿಯಮ ಗಾಳಿಗೆ ತೂರಿ ಜನಾಶೀರ್ವಾದ ಯಾತ್ರೆ ಮಾಡಿದರು. ಈಗ ಅರಗ ಜ್ಞಾನೇಂದ್ರ ಅವರ ಕ್ಷೇತ್ರದಲ್ಲಿ ಜಾತ್ರೆಗೆ ಅವಕಾಶ ಕೊಟ್ಟಿದ್ದಾರೆ. ಆದರೆ ಇವರ ಮೇಲೆ ಮಾತ್ರ ಕೇಸ್ ಹಾಕಿಲ್ಲ.

    ನಮ್ಮ ಮೇಲೆ ಸುಳ್ಳು ಕೇಸ್ ಹಾಕಿ ಎಫ್ ಐಆರ್ ದಾಖಲಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈ ಸರ್ಕಾರ ಪಕ್ಷಪಾತ ಮಾಡುತ್ತಿದೆ. ರೋಗ ನಿಯಂತ್ರಿಸಲು ನಿಷ್ಪಕ್ಷಪಾತ ತೀರ್ಮಾನ ತೆಗೆದುಕೊಳ್ಳುತ್ತಿಲ್ಲ. ಇವರ ಉದ್ದೇಶ ಒಳ್ಳೆಯದಿಲ್ಲ. ಅವರ ಉದ್ದೇಶ ಪಾದಯಾತ್ರೆ ನಿಲ್ಲಿಸುವುದು. ಅದಕ್ಕಾಗಿ ಅಧಿಕಾರಿಗಳ ಮೂಲಕ ನಿತ್ಯ ಒಂದಲ್ಲ ಒಂದು ಆದೇಶ ಹೊರಡಿಸಿದರು.

    ನಾವು ಇದಕ್ಕೆಲ್ಲ ಹೆದರುವುದಿಲ್ಲ. ಸೋಂಕು ಹೆಚ್ಚಾದರೆ ಅದು ಪಾದಯಾತ್ರೆಯಿಂದಲ್ಲ. ದೇಶದೆಲ್ಲೆಡೆ ಸ್ವಾಭಾವಿಕವಾಗಿ 3ನೆ ಅಲೆ ಹಬ್ಬುತ್ತಿದೆ. ರಾಜ್ಯದ ಜನರ ಆರೋಗ್ಯದ ಬಗ್ಗೆ ನಮಗೆ ಕಾಳಜಿ ಇದೆ. ನಮ್ಮ ಪಾದಯಾತ್ರೆಯಿಂದ ಜನರಿಗೆ ತೊಂದರೆ ಆಗಬಾರದು ಎಂದು ಚರ್ಚೆ ಮಾಡಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದ್ದೇವೆ.

    ಬೆಂಗಳೂರಿನಲ್ಲಿ ಸೋಂಕು ಹೆಚ್ಚಾಗುತ್ತಿದೆ. ನಮ್ಮ ಯಾತ್ರೆ ಬೆಂಗಳೂರು ಪ್ರವೇಶಿಸಿ, 19 ರಂದು ನಡೆಯಬೇಕಿದ್ದ ಸಮಾವೇಶಕ್ಕೆ ಲಕ್ಷಾಂತರ ಜನ ಸೇರುವ ಸಾಧ್ಯತೆಯಿರುವುದರಿಂದ ಈ ತೀರ್ಮಾನ ತೆಗೆದುಕೊಂಡಿದ್ದೇವೆ. ಕೋವಿಡ್ ಅಲೆ ಕಡಿಮೆಯಾಗಿ, ನಿಯಮ ಸಡಿಲಗೊಂಡ ನಂತರ ಮತ್ತೆ ರಾಮನಗರದಿಂದಲೇ ಪಾದಯಾತ್ರೆ ಮುಂದುವರಿಸುತ್ತೇವೆ.

    ನಮ್ಮ ಕಾರ್ಯಕರ್ತರು ಉತ್ಸಾಹ ಕಳೆದುಕೊಳ್ಳುವುದು ಬೇಡ. ರಾಮನಗರದಿಂದ ಮತ್ತೆ ಆರಂಭವಾಗಿ ಎಲ್ಲಿ ಮುಗಿಯಬೇಕು ಎಂದು ತೀರ್ಮಾನ ಮಾಡಿದ್ದೆವೋ ಅಲ್ಲೇ ಮುಕ್ತಾಯವಾಗಲಿದೆ. ಕಾಂಗ್ರೆಸ್ ಜನರ ಒಳಿತು ಬಯಸುವ ಪಕ್ಷ. ಜನರ ಒಳಿತೇ ಕಾಂಗ್ರೆಸ್ ಧ್ಯೇಯ. ಈ ಭಾಗದ ಸಂಸದರಾಗಿ ಡಿ.ಕೆ. ಸುರೇಶ್ ಅವರು ಪಾದಯಾತ್ರೆಯನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದು, ಅವರಿಗೆ ಮತ್ತು ಅವರ ತಂಡಕ್ಕೆ ಅಭಿನಂದನೆಗಳನ್ನು ತಿಳಿಸುತ್ತೇನೆ.

    Related

    Share. Facebook Twitter LinkedIn Email WhatsApp

    Related Posts

    ಶಿಡ್ಲಘಟ್ಟ ಕ್ಕೆ 8 ರಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

    ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡ ಶಿಕ್ಷಣ ಸಚಿವ ಬಿಸಿ ನಾಗೇಶ್

    ಗುರೂಜಿ ಅಂತ್ಯಕ್ರಿಯೆಗೆ ಭರದ ಸಿದ್ಧತೆ ;ಅಂತಿಮ ದರ್ಶನಕ್ಕೆ ಅವಕಾಶ

    ಗುರೂಜಿ ಹತ್ಯೆಯ ಬಗ್ಗೆ ಆರೋಪಿ ಪತ್ನಿಯ ಮಾತು: ಗುರೂಜಿ ಒಳ್ಳೆಯವರು ಎಂದ ಹಂತಕನ ಹೆಂಡತಿ

    ಅಧಿಕಾರಿಗಳ ಕಾರ್ಯವೈಖರಿ ತೃಪ್ತಿ ದಾಯಕವಾಗಿಲ್ಲ; ಜಿಲ್ಲಾಧಿಕಾರಿ ಆರ್ ಲತಾ

    ಇಂದು ಮಧ್ಯಾಹ್ನ ಹುಬ್ಬಳ್ಳಿಯಲ್ಲಿ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

    ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ: ಆರೋಪಿ ಮಹಾಂತೇಶ್ ಪತ್ನಿಯಿಂದ ಸ್ಫೋಟಕ ಮಾಹಿತಿ ಬಯಲು

    ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣ: ನನ್ನ ಗಂಡ ಮಾಡಿದ್ದು ತಪ್ಪು ಎಂದ ಆರೋಪಿ ಪತ್ನಿ

    ಗುರೂಜಿಗೂ ನನಗೂ ಯಾವುದೇ ಸಂಬಂಧ ಇಲ್ಲ: ಮಹಾಂತೇಶ್ ಪತ್ನಿ ವನಜಾಕ್ಷಿ

    ಗುರೂಜಿ ಅಂತ್ಯಕ್ರಿಯೆಗೆ ಭರದ ಸಿದ್ಧತೆ: ಅಂತಿಮ ದರ್ಶನಕ್ಕೆ ಅವಕಾಶ

    ರಾಜ್ಯ ಸರ್ಕಾರದ ನಿರ್ಲಕ್ಷ್ಯ: ಹೊಲಗಳಿಗೆ ಹೋಗಲು ದಾರಿ ಇಲ್ಲದೇ ರೈತರು ಕಂಗಾಲು

    ಕಾಮುಕ ಶಿಕ್ಷಕನ ಮೊಬೈಲ್ ಕಳ್ಳತನ ಮಾಡಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ್ದರಂತೆ..!

    ಶವಗಾರದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಸಿಬ್ಬಂದಿ ಹಾಗೂ ಸಂಬಂಧಿಕರು: ಗುರೂಜಿ ಅಗಲಿಕೆಗೆ ಕಣ್ಣೀರಾದ ಸಿಬ್ಬಂದಿ

    ತಂಡ ರಚನೆ ಮಾಡಿ ನಾಲ್ಕು ಗಂಟೆಯಲ್ಲಿಯೇ ಆರೋಪಿಗಳನ್ನು ಬಂಧಿಸಿದ್ದೇವೆ: ಲಾಭುರಾಮ್

    ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣ: ವನಜಾಕ್ಷಿಯ ತೀವ್ರ ವಿಚಾರಣೆ ನಡೆಸಿದ ಪೊಲೀಸರು

    20ಕ್ಕೂ ಹೆಚ್ಚು ಜನರಿಂದ ಗುರೂಜಿ ಹತ್ಯೆಗೆ ಸ್ಕೇಚ್: ತನಿಖೆಯಲ್ಲಿ ಬಯಲಾಯ್ತು ಮತ್ತಷ್ಟು ಬೆಚ್ಚಿ ಬೀಳಿಸೋ ಮಾಹಿತಿ

    ಎರಡು ದಿನವಾದರು ಸಿಕ್ಕಿಲ್ಲ ನೀರಿನಲ್ಲಿ ಕೊಚ್ಚಿ ಹೋದ ಬಾಲಕಿಯ ಶವ: ಮುಂದುವರಿದ ಶೋಧ ಕಾರ್ಯಾ

    ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಬುರ್ಕಾ ಸಿಲುಕಿ ಮಹಿಳೆ ಸಾವು

    ಹವಾಮಾನ ವೈಪರೀತ್ಯದಿಂದ ಅಮರನಾಥ ಯಾತ್ರೆಗೆ ಬ್ರೇಕ್

    ‘ತಾಜ್ ಮಹಲ್ ಕಟ್ಟದಿದ್ದರೆ ಲೀಟರ್ ಪೆಟ್ರೋಲ್ ಗೆ 40 ಸಾವಿರ ಬೆಲೆ ಬರುತ್ತಿತ್ತು’.. ಮೋದಿ ವಿರುದ್ಧ ಓವೈಸಿ ವ್ಯಂಗ್ಯ

    ನೈಟ್ ಕ್ಲಬ್ ಶೂಟಿಂಗ್… ಆಕಸ್ಮಿಕವಾಗಿ ತನ್ನ ಸ್ನೇಹಿತನಿಗೆ ಗುಂಡು ಹಾರಿಸಿದ ವ್ಯಕ್ತಿಯೊಬ್ಬ

    ರಾಹುಲ್ ಗಾಂಧಿ ನಕಲಿ ವಿಡಿಯೋ ಪ್ರಕರಣದಲ್ಲಿ ಸುದ್ದಿ ನಿರೂಪಕ ಬಂಧನ!

    ರಸ್ತೆ ಸಮಸ್ಯೆಯ ಗೋಳು ಕೇಳದ ಜನಪ್ರತಿನಿಧಿಗಳು: ಶಾಲೆಗೆ ಹೋಗಲು ಮಕ್ಕಳ ಹರಸಾಹಸ

    ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪೋಲೀಸರು ಶಾಮೀಲಾಗಿರುವುದಕ್ಕೆ ಅಪರಾಧ ಪ್ರಕರಣಗಳು ಹೆಚ್ಚಾಗಲು ಕಾರಣ

    ಟೈಯರ್ ಸ್ಫೋಟಗೊಂಡು ವ್ಯಕ್ತಿ ಸಾವು: ಸಿಸಿಟಿವಿಯಲ್ಲಿ ಭಯಾನಕ ವಿಡಿಯೋ ಸೆರೆ

    ಹೆಂಡತಿಯನ್ನು ಕಂಟ್ರೋಲ್ ಮಾಡೋಕೆ ಆಗದಿದ್ದರೆ ಓಡಿಹೋಗ್ತಾರೆ: ಕೆ.ಎಸ್.ಈಶ್ವರಪ್ಪ

    ಗುರೂಜಿ ಹತ್ಯೆಮಾಡಿದ ಹಂತಕರನ್ನು ಬೆನ್ನತ್ತಿ ಹಿಡಿದ ಪೊಲೀಸರು.. Video ನೋಡಿ

    ಜಮೀರ್ ಮನೆ ಮೇಲೆ ಎಸಿಬಿ ದಾಳಿ: ಮೊದಲು ಖುಷಿ ಪಟ್ಟಿದ್ದು ಕಾಂಗ್ರೇಸ್ ನವರೇ: ಎಸ್ ಟಿ ಸೋಮಶೇಖರ್

    ಸರಳ ವಾಸ್ತು ಗುರೂಜಿ ಕೊಲೆಗೆ ಮತ್ತೊಂದು ತಿರುವು – ಆಪ್ತನ ಪತ್ನಿ ಪೊಲೀಸರ ವಶಕ್ಕೆ

    ಬಾವಿಯಲ್ಲಿ ರುಂಡವಿಲ್ಲದ ಮನುಷ್ಯನ ದೇಹ ಪತ್ತೆ

    ಗುರೂಜಿಯನ್ನು 60 ಬಾರಿ ಇರಿದು ಕೊಂದ ಹಂತಕರು..! ಭೀಕರ ದೃಶ್ಯ ನೋಡಿ

    ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಭೀಕರ ಹತ್ಯೆ..! CCTV ಯಲ್ಲಿ ದೃಶ್ಯ ಸೆರೆ

    ಭಕ್ತರ ಸೋಗಿನಲ್ಲಿ ಬಂದವರಿಂದ ಸರಳ ವಾಸ್ತು ಗುರೂಜಿ ಚಂದ್ರಶೇಖರ್ ಕೊಲೆ

    ಮಾನವ ರಹಿತ ಯುದ್ಧ ವಿಮಾನ ಹಾರಾಟ ಯಶಸ್ವಿ: ಕೇಂದ್ರ ಸಚಿವ ಎ. ನಾರಾಯಣಸ್ವಾಮಿ

    ಕಟ್ಟಡ ಕಾರ್ಮಿಕರ ಆರೋಗ್ಯ ಸೇವೆಗೆ ಸಂಚಾರಿ ಆರೋಗ್ಯ ಕ್ಲಿನಿಕ್

    ಬೆಳಗಾವಿ ನೂತನ ಎಸ್ ಪಿ ಯಾಗಿ ಡಾ. ಸಂಜೀವ ಪಾಟೀಲ್ ಅಧಿಕಾರ ಸ್ವೀಕಾರ.!

    ಚೀಮಂಗಲ ಗ್ರಾಮ ಪಂಚಾಯಿತಿ ಕಟ್ಟಡ ಜಿಲ್ಲೆಗೆ ಮಾದರಿ: ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್

    ನಗರಸಭೆ ವಿರುದ್ಧ ಸಾರ್ವಜನಿಕರ ಆಕ್ರೋಶ..! ಯಾಕೆ ಗೊತ್ತಾ..?

    ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ಹಣ ದೋಚಿಕೊಂಡು ಪರಾರಿಯಾದ ಕಳ್ಳರು.!

    ಗೋವಾ ಬೆಳಗಾವಿ ಸಂಪರ್ಕ ಸೇತುವೆ: ಭಾರೀ ಮಳೆಯಿಂದಾಗಿ ಗುಡ್ಡ ಕುಸಿತ – ರಸ್ತೆ ಸಂಪೂರ್ಣ ಬಂದ್.!

    https://www.youtube.com/watch?v=8HqvcflixgA&t=53s
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.