ನವದೆಹಲಿ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿಯವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರ ಸಮ್ಮುಖದಲ್ಲಿ ಅವರು ಬಿಜೆಪಿ ಸೇರ್ಪಡೆಯಾದರು.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಾಜಿ ಪ್ರಧಾನಿಯವರ ಕನಸಿನ ಜೈ ಜವಾನ್, ಜೈ ಕಿಸಾನ್ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ. ಬಿಜೆಪಿಯಲ್ಲಿ ನನ್ನ ಅಜ್ಜ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ದೃಷ್ಟಿಕೋನವನ್ನು ಮುಂದಕ್ಕೆ ಕೊಂಡೊಯ್ಯಲು ನನಗೆ ಅವಕಾಶ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ. ಪಕ್ಷದ ನಾಯಕರ ನಿರ್ದೇಶನದಂತೆ ನಾನು ಕೆಲಸ ಮಾಡುತ್ತೇನೆ ಎಂದಿದ್ದಾರೆ.
ಮಡಿಲಲ್ಲಿ ಲ್ಯಾಪ್ ಟಾಪ್ ಇಟ್ಟುಕೊಂಡು ಕೆಲಸ ಮಾಡುವ ಅಭ್ಯಾಸ ಇದ್ಯಾ!? – ಹಾಗಿದ್ರೆ ಇದು ಅಪಾಯ ;!
ಐ.ಎನ್.ಡಿ.ಐ.ಎ ಮೈತ್ರಿಕೂಟಕ್ಕೆ ಯಾವುದೇ ಸಿದ್ಧಾಂತವಿಲ್ಲ ಆದರೆ ಮೋದಿಜಿಯನ್ನು ಸೋಲಿಸುವ ಗುರಿಯನ್ನು ಹೊಂದಿದೆ. ಕಾಂಗ್ರೆಸ್ ಸಿದ್ಧಾಂತ ಏನೆಂಬುದನ್ನು ರಾಹುಲ್ ಗಾಂಧಿಯವರು ಹೇಳಬೇಕು ಎಂದು ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನಗಾಗಿ ಬಿಜೆಪಿಯ ಬಾಗಿಲು ತೆರೆದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ನಡ್ಡಾ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಮತ್ತು ಬ್ರಜೇಶ್ ಪಾಠಕ್ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಅವರು ಹೇಳಿಕೊಂಡಿದ್ದಾರೆ.