ಭೋಪಾಲ್: ಲೋಕಸಭಾ ಚುನಾವಣೆ (General Elections 2024) ಹೊಸ್ತಿಲಲ್ಲಿ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ಗೆ (Congress) ಸರಣಿ ಆಘಾತ ಎದುರಾಗುತ್ತಿದ್ದು, ಪಕ್ಷ ತೊರೆಯುವರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಮಹಾರಾಷ್ಟ್ರದ ಬಳಿಕ ಮಧ್ಯಪ್ರದೇಶದಲ್ಲಿ (Madhya Pradesh) ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ ಸೇರಿದಂತೆ ಹಲವು ಪ್ರಮುಖ ನಾಯಕರು ಕಾಂಗ್ರೆಸ್ ತೊರೆದು ಬಿಜೆಪಿ (BJP) ಸೇರ್ಪಡೆಯಾಗಿದ್ದಾರೆ.
Bigg Breaking: ಪ್ರತಾಪ್ ಸಿಂಹಾಗೆ ಟಿಕೆಟ್ ಕೈ ತಪ್ಪು ಸಾಧ್ಯತೆ: ಮೈಸೂರಿನಿಂದ ಯದುವೀರ್ ಒಡೆಯರ್ ಸ್ಫರ್ಧೆ?
ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್, ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಸಂಸದ ಗಜೇಂದ್ರ ಸಿಂಗ್ ರಾಜುಖೇದಿ, ಮಾಜಿ ಶಾಸಕ ಸಂಜಯ್ ಶುಕ್ಲಾ, ಅರ್ಜುನ್ ಪಾಲಯ್ಯ, ವಿಶಾಲ್ ಪಟೇಲ್, ಭೋಪಾಲ್ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಕೈಲಾಶ್ ಮಿಶ್ರಾ ಸೇರಿ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ಸಿನ ಜನಪ್ರಿಯ ನಾಯಕರಲ್ಲಿ ಸಂಜಯ್ ಮತ್ತು ವಿಶಾಲ್ ಇದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇಬ್ಬರೂ ನಾಯಕರು ಬಿಜೆಪಿ ನಾಯಕರನ್ನು ಸೋಲಿಸಿ ಗೆದ್ದಿದ್ದರು. ಕಮಲ್ನಾಥ್ ಸರ್ಕಾರದಲ್ಲಿ ಇಬ್ಬರೂ ನಾಯಕರು ಸಾಕಷ್ಟು ಜನಪ್ರಿಯರಾಗಿದ್ದರು. ಪಚೌರಿ ಅವರನ್ನು ಗಾಂಧಿ ಕುಟುಂಬದ ಆಪ್ತ ಎಂದೇ ಗುರುತಿಸಲಾಗಿತ್ತು. ರಕ್ಷಣಾ ಖಾತೆ, ರಾಜ್ಯ ಸಚಿವರಾಗಿ, ನಾಲ್ಕು ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಪಚೌರಿ ಕಾರ್ಯನಿರ್ವಹಿಸಿದ್ದರು.