ವಿಜಯಪುರ:- ಧರ್ಮದಲ್ಲಿ ರಾಜಕಾರಣ ಇರಬೇಕೆ ವಿನಹ ರಾಜಕಾರಣದಲ್ಲಿ ಧರ್ಮ ಇರಬಾರದು ಎಂದು DCM ಡಿಕೆಶಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಧರ್ಮ ಎಂದರೆ ಬದುಕು, ಎಲ್ಲರನ್ನು ಪ್ರೀತಿಸೋ ಮಾರ್ಗ, ಧರ್ಮ ಎಂದರೆ ಸಮಾನತೆ ಎಂದು ಡಿವಿಜಿ ಸಾಲುಗಳ ಮೂಲಕ ವಿವರಿಸಿದರು. ಧರ್ಮದಲ್ಲಿ ರಾಜಕಾರಣ ಇರಬೇಕು, ರಾಜಕಾರಣದಲ್ಲಿ ಧರ್ಮ ಇರಬಾರದು. ಆದರೆ, ಇತ್ತೀಚೆಗೆ ಅದು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇನ್ನು ಜನರ ಸಹಕಾರದಿಂದ ಮಠಗಳು ಬೆಳೆಯುತ್ತವೆ. ಜೊತೆಗೆ ಪೀಠಾಧಿಪತಿಗಳು ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.
ಇನ್ನೂ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನೆಂದು ಘೋಷಣೆ ಮಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಯಾವುದೇ ಧರ್ಮ ಕೂಡ ಶಾಂತಿ ಸಹೋದರತೆಯನ್ನು ಸಾರುತ್ತದೆ. ಧರ್ಮ ಯಾವುದಾದರೂ ದೇವರು ಒಬ್ಬನೇ, ಎಲ್ಲದರಲ್ಲೂ ದೇವರನ್ನು ನೋಡುತ್ತೇವೆ ಎಂದರು.