ಮೈಸೂರು: ಬುದ್ಧರ ಹೊಗಳುವ ಭರದಲ್ಲಿ ಹಿಂದೂ ಧರ್ಮಕ್ಕೆ ಸಾಹಿತಿ ಪ್ರೊ.ಕೆ.ಎಸ್. ಭಗವಾನ್ ಅಪಮಾನ ಮಾಡಿದ್ದಾರೆ. ಮಹಿಷ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮ ಅಂದ್ರೆ ಅದು ಹಿಂದೂಗಳ ಧರ್ಮ ಅಲ್ಲ, ಬ್ರಾಹ್ಮಣರ ಧರ್ಮ. ಹಿಂದೂ ಎಂದರೆ ಹಿಂದಕ್ಕೆ ಹೋಗುವ ಜನ ಎಂದು ಹೇಳಿದ್ದಾರೆ.
ಹಿಂದೂಗಳು ಮುಂದಕ್ಕೆ ಬಾರದ ಜನ ಹಾಗೂ ಬೇರೆಯವರನ್ನು ಮುಂದಕ್ಕೆ ಬಿಡುವುದಿಲ್ಲ. ಗಂಡಸರನ್ನು ಮಾತ್ರ ಬ್ರಾಹ್ಮಣರು ಅಂತಾರೆ. ಹೆಂಗಸರನ್ನಾ ಬ್ರಾಹ್ಮಣರು ಎನ್ನಲ್ಲಾ, ಅವರನ್ನು ಶೂದ್ರರು ಅಂತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ದೇವಸ್ಥಾನ ಕಟ್ಟೋದು ಶೂದ್ರರು. ದೇವಸ್ಥಾನದ ಒಳಗೆ ಇರೋರು ಬ್ರಾಹ್ಮಣರು. ದೇವಸ್ಥಾನ ಕಟ್ಟಿದ ಶೂದ್ರರನ್ನೇ ಬಿಟ್ಟುಕೊಳ್ಳಲ್ಲ. ನಾವು ಶೂದ್ರರಲ್ಲಾ ಎಂದು ಹೇಳಬೇಕು.
Mysore Dasara 2024: ಮೈಸೂರು ದಸರಾ ಮಹೋತ್ಸವದ ವೇಳಾಪಟ್ಟಿ ಬಿಡುಗಡೆ: ಜಂಬೂಸವಾರಿ ಯಾವಾಗ ಗೊತ್ತಾ..?
ಶೂದ್ರರು ದೇವಸ್ಥಾನಗಳಿಗೆ ಹೋಗೋದನ್ನು ನಿಲ್ಲಸಬೇಕು. ನಾನು 50 ವರ್ಷ ಆಯ್ತು ದೇವಸ್ಥಾನಕ್ಕೆ ಹೋಗಿ. ದೇವಸ್ಥಾಕ್ಕೆ ಹೋದ್ರೆ ಏನು ಆಗಲ್ಲ. ತಟ್ಟೆಗೆ ದುಡ್ಡು ಹಾಕ್ತೀರಾ, ಅರ್ಧ ಕಾಯಿ ಇಟ್ಟುಕೊಂಡು ಅರ್ಧ ಕೊಡ್ತಾರೆ ಅಷ್ಟೇ. ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು. ನಾವು ಶೂದ್ರರು ಎಂದು ಒಪ್ಪಿಕೊಳ್ಳಬೇಕಾ ಎಂದು ಪ್ರಶ್ನಿಸಿದರು.
ಹಿಂದೂ ಧರ್ಮ ನಮ್ಮದಲ್ಲ. ನಮಗೆ ಹಿಂದೂ ಧರ್ಮ ಬೇಕಿಲ್ಲ. ಎಲ್ಲರೂ ಬುದ್ಧ ಗುರುಗಳನ್ನು ನಂಬಿ. ನಾನು ಹೇಳಿದ್ದು ನಂಬಿ ಅಂತಾ ಬುದ್ಧ ಹೇಳಲ್ಲ. ನಾನು ಹೇಳಿದ್ದು ಕೇಳಬೇಕು ಅಂತಾ ಏಸು ಹೇಳ್ತಾರೆ. ನಾನು ಹೇಳದ್ದು ಕೇಳದಿದ್ರೆ ನರಕ್ಕೆ ಹೋಗ್ತೀರಾ ಅಂತಾ ಕೃಷ್ಣ ಹೇಳ್ತಾನೆ. ನಾವು ಬುದ್ಧ ಧರ್ಮಕ್ಕೆ ಹೋಗಬೇಕು. ಶೂದ್ರರು ಎಂಬ ಗುಲಾಮರನ್ನು ಎಚ್ಚರಿಸಬೇಕು. ಯಾರು ಹೀನನಾಗಿದ್ದಾನೆ ಅವನು ಹಿಂದೂ. ಹಿಂದೂ ಎಂದರೆ ಹೀನಾ ಎಂದು ಅರ್ಥ. ಯಾರು ಹಿಂದೂ ಆಗಬಾರದು ಎಂದು ತಿಳಿಸಿದರು.