ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ನವರು ಅಡ್ಡ ಮತದಾನ ಮಾಡುತ್ತಾರೆ. ಅವರ ವೋಟು ನಮಗೆ ಬೀಳುತ್ತದೆ ಎಂದು ಶಾಸಕ ಪ್ರದೀಪ್ ಈಶ್ವರ್ ತಿಳಿಸಿದರು. ನಮ್ಮ ಪಕ್ಷದ 3 ಅಭ್ಯರ್ಥಿಗಳು ಸಹ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು
Rajyasabha Election: ಕಾಂಗ್ರೆಸ್ ಪರ ಎಸ್.ಟಿ.ಸೋಮಶೇಖರ್ ಮತ: ಬಿಜೆಪಿಯಿಂದಲೇ ಉಚ್ಛಾಟಿಸುವ ಸಾಧ್ಯತೆ
![Demo](https://ainlivenews.com/wp-content/uploads/2023/12/spoorthi-1.jpg)
ರಾಜ್ಯಸಭಾ ಚುನಾವಣಾ (Rajya Sabha Election) ಮತದಾನದ ಕುರಿತು ಮಾತನಾಡಿದ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ತಾಕತ್ತು. ಆಪರೇಷನ್ ಅವರಲ್ಲ (ಬಿಜೆಪಿ), ನಾವು ಸರ್ಜರಿ ಮಾಡುತ್ತೇವೆ ಎಂದು ಹೇಳಿದರು.
ರಾಜ್ಯಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಕರ್ನಾಟಕದ 4 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ನಿಂದ ಅಜಯ್ ಮಾಕೆನ್, ಎನ್.ಹುಸೇನ್, ಚಂದ್ರಶೇಖರ್ ಮತ್ತು ಬಿಜೆಪಿಯಿಂದ ನಾರಾಯಣ್ ಸಾ.ಭಾಂಡಗೆ ಹಾಗೂ ಜೆಡಿಎಸ್ನಿಂದ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)