ಶಿವಮೊಗ್ಗ: ಮುಡಾ ಹಗರಣ ಕುರಿತು ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಕೊಟ್ಟಿರುವ ಬಗ್ಗೆ ನ್ಯಾಯಾಲಯದ ತೀರ್ಪು ಬರುವ ಮೊದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಲಹೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,
ನ್ಯಾಯಾಲಯದ ತೀರ್ಪು ನೂರಕ್ಕೆ ನೂರು ಬರುತ್ತದೆ. ತೀರ್ಪು ಬಂದ ನಂತರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ. ಯಾಕೆಂದರೆ ಸಿಎಂ ಸಿದ್ದರಾಮಯ್ಯ ಮಾಡಿರುವ ಹಗರಣಗಳು ಸಾರ್ವಜನಿಕವಾಗಿದೆ ಎಂದರು.ಯಾವುದೇ ಕಾರಣಕ್ಕೂ ಸಿದ್ದರಾಮಯ್ಯನವರಿಗೆ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.
ಡಯಟ್, ವ್ಯಾಯಾಮ ಯಾವುದೂ ಇಲ್ಲದೇ ಹೊಟ್ಟೆಯ ಬೊಜ್ಜನ್ನು ಕರಗಿಸುವುದು ಹೇಗೆ? ಇಲ್ಲಿವೆ ಸಿಂಪಲ್ ಟಿಪ್ಸ್
ಅದಕ್ಕಿಂತ ಮೊದಲೇ ಗೌರವಯುತವಾಗಿ ರಾಜೀನಾಮೆ ಕೊಡೋದು ಒಳ್ಳೆಯದು. ಅವರು ಮಾಡಿರುವ ಎಲ್ಲಾ ಹಗರಣ ಸಾಬೀತಾಗುತ್ತಿವೆ. ಮುಡಾ ಹಗರಣ ಜಗಜ್ಜಾಹೀರು ಆಗಿರುವ ಸಂಗತಿಯಾಗಿದೆ. ಬಿಜೆಪಿ ಸರ್ಕಾರದ ಅವಧಿಯ ಕೋವಿಡ್ ವರದಿ ವಿಚಾರದ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸರ್ಕಾರಕ್ಕೆ ಸ್ವತಂತ್ರ ಇದೆ. ಯಾವುದೇ ತೀರ್ಮಾನ ತೆಗೆದುಕೊಳ್ಳಲಿ ಎಂದು ಹೇಳಿದರು .