ಹುಬ್ಬಳ್ಳಿ: ನಗರದಲ್ಲಿಂದು ಸುದ್ದಿಗೋಷ್ಟಿಯೊಂದನ್ನು ನಡೆಸಿ ಮಾತಾಡಿದ ಹೆಚ್ ಡಿ ಕುಮಾರಸ್ವಾಮಿ ಯವರು ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರನ್ನು ದೂರಿದರು. ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಬೇಕಾಗಿರುವುದು ತಮ್ಮ ಹಿರಿಯ ನಾಯಕ ಮನೆಗಳ ಮುಂದೆಯೇ ಹೊರತು ದೇವೇಗೌಡ ಅಥವಾ ತನ್ನ ಮನೆಯ ಮುಂದೆ ಅಲ್ಲ ಎಂದು ಅವರು ಹೇಳಿದರು.
ಒಬ್ಬ ವ್ಯಕ್ತಿಯಿಂದ ನಡೆದಿರುವ ಕೃತ್ಯಗಳಿಗೆ ದೇವೇಗೌಡ ಹೇಗೆ ಹೊಣೆಗಾ ರರಾಗುತ್ತಾರೆ ಎಂದು ಪ್ರಶ್ನಿಸಿದ ಕುಮಾರಸ್ವಾಮಿ ಸಿದ್ದರಾಮಯ್ಯನವರು ಹಿಂದೆ ತಮ್ಮ ಕುಟುಂಬದಲ್ಲಿ ನಡೆದ ದುರ್ಘಟನೆಯನ್ನು ಮರೆತಿದ್ದಾರೆ ಎಂದರು. ಆ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಕೆಲಸ ತಾನ್ಯಾವತ್ತೂ ಮಾಡಿಲ್ಲ, ಆದರೆ ಸಮಯ ಬಂದಾಗ ಅದರ ಪ್ರಸ್ತಾಪ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.
Raw banana: ಸಿಹಿಯಾದ ಬಾಳೆಹಣ್ಣು ಮಾತ್ರವಲ್ಲ ಬಾಳೆಕಾಯಿ ಕೂಡ ಆರೋಗ್ಯಕ್ಕೆ ಉತ್ತಮ!
ಸಿದ್ದರಾಮಯ್ಯ ಕುಟುಂಬದಲ್ಲಿ ಅ ದುರ್ಘಟನೆ ನಡೆದಾಗ ಅವರಿಗೆ ನೆರವಾಗಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು. ಸೌಜನ್ಯಕ್ಕಾದರೂ ಆ ಉಪಕಾರದ ನೆನಪು ಇಟ್ಟುಕೊಳ್ಳದ ಸಿದ್ದರಾಮಯ್ಯ ಪ್ರಜ್ವಲ್ ರೇವಣ್ಣ ಪ್ರಕರಣದ ಜೊತೆ ಪ್ರಧಾನಿ ಮೋದಿಯವರ ಹೆಸರು ಥಳುಕು ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.