ಮೈಸೂರು: ಕಡಿಮೆ ಅವಧಿಯಲ್ಲಿ ಜನಪ್ರಿಯತೆ ಕಳೆದುಕೊಂಡ ಏಕೈಕ ಸರ್ಕಾರ ಸಿದ್ದರಾಮಯ್ಯ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಕಡಿಮೆ ಅವಧಿಯಲ್ಲಿ ಜನಪ್ರಿಯತೆ ಕಳೆದುಕೊಂಡ ಏಕೈಕ ಸರ್ಕಾರ ಸಿದ್ದರಾಮಯ್ಯ ಸರ್ಕಾರ. ಇವರು ಬಡವರ ಪರವಾಗಿ, ಶೋಷಿತರ ಪರವಾಗಿ, ರೈತ ಪರವಾಗಿ ಕೆಲಸ ಮಾಡುತ್ತಿಲ್ಲ. ಹೀಗಾಗಿ ಜನ ಬೇಸರ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
ಇನ್ನೂ ಲೋಕಾಸಭಾ ಚುನಾವಣೆಗೆ ಕರ್ನಾಟಕ ಸರ್ಕಾರದ 18 ಸಚಿವರನ್ನು ಕಣಕ್ಕಿಳಿಸಲು ಸಿಎಂ, ಡಿಸಿಎಂ ಪ್ಲಾನ್ ಮಾಡಿದ್ದರು. ಆದರೆ ಮೋದಿಯವರ ಅಲೆಗೆ ಹೆದರಿ ಸಚಿವರು ಸ್ಪರ್ಧೆ ಮಾಡಲು ಹಿಂದೇಟು ಹಾಕಿದ್ದಾರೆ. ಹೀಗಾಗಿ ಯಾರೂ ಸ್ಪರ್ಧೆ ಮಾಡುತ್ತಿಲ್ಲ. ಎಲ್ಲಾ ಸಚಿವರಿಗೂ ಸೋಲಿನ ಭಯ ಎಂದು ಟೀಕಿಸಿದರು.
Cucumber: ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಇಷ್ಟೆಲ್ಲಾ ಲಾಭಗಳಿದ್ಯಾ..? ಇಲ್ಲಿದೆ ಫುಲ್ ಡೀಟೇಲ್ಸ್
ಜೆಡಿಎಸ್-ಬಿಜೆಪಿ ಒಂದಾಗಿ ಇರುವುದು ನಮಗೆ ಪ್ಲಸ್ ಆಗಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ, ಯಾವುದೇ ಪ್ಲಸ್, ಮೈನಸ್ ಇಲ್ಲ. ಜನ ತೀರ್ಮಾನ ಮಾಡುತ್ತಾರೆ. ಕಾಂಗ್ರೆಸ್ ಸೋಲಿನ ಭಯದಿಂದ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ ಎಂದರು. ರಾಜ್ಯದಲ್ಲಿ ಬರಗಾಲ ಇದೆ. ಶೀಘ್ರವೇ ದೇವಿಯ ಅನುಗ್ರಹದಿಂದ ಒಳ್ಳೆಯ ಮಳೆಯಾಗಲಿ ಎಂದು ಚಾಮುಂಡೇಶ್ವರಿಯನ್ನು ಪ್ರಾರ್ಥಿಸಿರುವುದಾಗಿ ಅವರು ಹೇಳಿದರು.