ಚಿತ್ರದುರ್ಗ: ಮಾಜಿ ಶಾಸಕ ತಿಪ್ಪಾರೆಡ್ಡಿ ಮಾತಾಡಿ, ಸಿದ್ದರಾಮಯ್ಯ ತಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳಬೇಕೆಂದರೆ ಕೂಡಲೇ ರಾಜೀನಾಮೆ ಕೊಡಬೇಕು. ಸಿದ್ದರಾಮಯ್ಯ ಅವರಿಗೆ ತಾವು ತಪ್ಪು ಮಾಡಿರುವುದು ಮನವರಿಕೆಯಾಗಿತ್ತು. ಆದ್ದರಿಂದ ಎಂದೂ ದೇವಸ್ಥಾನಗಳಿಗೆ ಹೋಗದೆ ಇರುವವರು, ಕಳೆದ ಒಂದು ತಿಂಗಳಿಂದ ಟೆಂಪಲ್ ರನ್ ಮಾಡಿದ್ದರು. ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅಧಿಕಾರದಲ್ಲಿದ್ದಾಗಿನ ಹಳೆಯ ಕೇಸ್ ಗಳನ್ನು ಯಾಕೆ ತನಿಖೆ ನಡೆಸಬೇಕು. ಎಂದರು. ವಿಧಾನ ಪರಿಷತ್ ಸದಸ್ಯ ಕೆ ಎಸ್ ನವೀನ್ ಮಾತಾಡಿ, ಸಿದ್ದರಾಮಯ್ಯ ಅವರು,
ರಾತ್ರಿ ಬಟ್ಟೆಯಿಲ್ಲದೇ ಮಲಗಿದ್ರೆ ಏನಾಗುತ್ತೆ..? ಇಲ್ಲಿದೆ ನಿಮಗೆ ಗೊತ್ತಿಲ್ಲದ ರೋಚಕ ಸತ್ಯಗಳು
ಸಿಎಂ ಆಗಿ ಮುಂದುವರೆಯಲು ಅವರಿಗೆ ನೈತಿಕ ಹಕ್ಕಿಲ್ಲ. ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಬಹುದು ಆದರೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವವರೆಗೂ ಅವರ ವಿರುದ್ದ ಬಿಜೆಪಿ ನಿರಂತರ ಹೋರಾಟ ಮಾಡಲಾಗುತ್ತದೆ ಹೇಳಿದರು. ಈ ಸಮಯದಲ್ಲಿ ಸಂಸದ ಗೋವಿಂದ ಕಾರಜೋಳ, ಮಾಜಿ ಶಾಸಕರಾದ ತಿಪ್ಪಾರೆಡ್ಡಿ, ಎಸ್ ಕೆ ಬಸವರಾಜನ್, ಲಿಂಗಮೂರ್ತಿ, ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಮಲ್ಲಿಕಾರ್ಜುನ್,ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ವಕ್ತಾರ ನಾಗರಾಜ್ ಬೇದ್ರೆ, ಸಹ ವಕ್ತಾರರಾದ ಯಶವಂತ್ ಕುಮಾರ್, ಛಲವಾದಿ ತಿಪ್ಪೇಸ್ವಾಮಿ ಇದ್ದರು.