ಚಿಕ್ಕಮಗಳೂರು: ರಾಮನ ಹೆಸರು ಇಟ್ಕೊಂಡಿದ್ದಕ್ಕೆ ರಾಮನ ಗುಣ ಬಂದಿದೆ ಅಂತಾ ಭಾವಿಸೋಕೆ ಆಗುತ್ತಾ? ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದೆ. ಆದ್ರೆ, ಗುಣ ಇದೆಯಾ? ಎಂದು ಮಾಜಿ ಸಚಿವ ಸಿ.ಟಿ ರವಿ (CT Ravi) ವ್ಯಂಗ್ಯವಾಡಿದ್ದಾರೆ.
ನಗರದ ಬಸವನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿರುವುದು (Ayodhya) ಬಿಜೆಪಿಯ ರಾಮ, ಸಿದ್ದರಾಮಯ್ಯ (Siddaramaiah) ಹೆಸರಲ್ಲೇ ರಾಮ ಇದ್ದಾನೆ ಎಂಬ ಮಾಜಿ ಸಚಿವ ಹೆಚ್. ಆಂಜನೇಯ ಅವರ ಹೇಳಿಕೆಗೆ ಬಿಜೆಪಿ ಮಾಜಿ ಸಚಿವ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.
Cashews Benefits: ಪ್ರತಿದಿನ ಗೋಡಂಬಿ ತಿನ್ನುವುದರಿಂದ ಎಷ್ಟೊಂದು ಪ್ರಯೋಜನವಿದೆ ಗೊತ್ತಾ..?
ನಿಮ್ಮ ಹೆಸರೇ ಆಂಜನೇಯ, ಸಿದ್ದರಾಮಯ್ಯರ ಹೆಸರಲ್ಲಿ ರಾಮ ಇದ್ದಾನೆ ಅಂತ ಹೇಳಿದ್ರಿ. ರಾಮ ಎಲ್ಲರಿಗೂ ನ್ಯಾಯ ಕೊಟ್ಟ. ಧರ್ಮದ ಪರ ಕೆಲಸ ಮಾಡಿದ. ನಿಮ್ಮ ಸಿದ್ದರಾಮಯ್ಯ ಎಲ್ಲರಿಗೂ ನ್ಯಾಯ ಕೊಟ್ರಾ? ಎಂದು ಪ್ರಶ್ನಿಸಿದ್ದಾರೆ.