ಬೆಂಗಳೂರು:- ಪ್ರಜ್ವಲ್ ಪಾಸ್ಪೋರ್ಟ್ ರದ್ದತಿಗೆ ಸಿಎಂ ಬರೆದ ಪತ್ರಕ್ಕೆ ವಿದೇಶಾಂಗ ಸಚಿವ ಜೈಶಂಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಮಾಡಿದ ಮನವಿಯನ್ನು ಮೇ 21 ರಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ವೀಕರಿಸಿದ್ದು, ಪಾಸ್ ಪೋರ್ಟ್ ವಶಪಡಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿದೆ ಎಂದು ಸ್ಪಷ್ಟಪಡಿಸಿದರು.
ಮೇ 21ರಂದು ಮಾತ್ರ ವಿದೇಶಾಂಗ ಸಚಿವಾಲಯವು ಕರ್ನಾಟಕದ ಮನವಿಯನ್ನು ಸ್ವೀಕರಿಸಿದೆ. ಕರ್ನಾಟಕದ ಮನವಿ ಸ್ವೀಕರಿಸಿದ ತತಕ್ಷಣ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕಾರ್ಯಪ್ರವೃತ್ತವಾಗಿದೆ. ಮೇ. 23 ರಿಂದಲೇ ಪಾಸ್ ಪೋರ್ಟ್ ವಶಪಡಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿದೆ. ಆದ್ರೆ, ಪಾಸ್ ಪೋರ್ಟ್ ಕಾಯ್ದೆಯ ಅನ್ವಯವೇ ಪಾಸ್ ಪೋರ್ಟ್ ವಶಪಡಿಸಿಕೊಳ್ಳಬೇಕಾಗಿದೆ. ಪಾಸ್ ಪೋರ್ಟ್ ವಶಪಡಿಸಿಕೊಳ್ಳಲು ನ್ಯಾಯಾಲಯ ಅಥವಾ ಪೊಲೀಸರ ಮನವಿ ಅಗತ್ಯವಿದೆ ಎಂದರು.