ಮಂಗಳೂರು: ಹೆಸರಿಟ್ಟ ತಕ್ಷಣ ಎಲ್ಲರೂ ರಾಮನಾಗಲು ಸಾಧ್ಯವಿಲ್ಲ. ಸಿದ್ದರಾಮಯ್ಯರಲ್ಲಿ ರಾಮನ ಹೆಸರಿದೆ, ರಾವಣನ ಗುಣವಿದೆ ಎಂದು ನಿಕಟಪೂರ್ವ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ. ಮಾಜಿ ಸಚಿವ ಆಂಜನೇಯ ಅವರು ಸಿದ್ದರಾಮಯ್ಯನೇ ರಾಮ ಎಂಬ ಹೇಳಿಕೆ ವಿಚಾರವಾಗಿ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ರಾಮ ಎಂಬುದು ಭಾವನಾತ್ಮಕ ನಂಬಿಕೆಗಳ ಸಂಕೇತ. ಮರ್ಯಾದಪುರುಷ ರಾಮನನ್ನು ಆದರ್ಶಪುರುಷನಾಗಿ ಸ್ವೀಕರಿಸಲಾಗಿದೆ.
ರಾಮನಿಗೆ ಇನ್ನೊಂದು ಹೋಲಿಕೆಯಿಲ್ಲ. ರಾಮನಿಗೆ ರಾಮನೇ ಹೋಲಿಕೆ. ಹೆಸರಿಟ್ಟ ತಕ್ಷಣ ಎಲ್ಲರೂ ರಾಮನಾಗಲು ಸಾಧ್ಯವಿಲ್ಲ ಎಂದು ಟಾಂಗ್ ನೀಡಿದರು. ರಾಜ್ಯದಲ್ಲಿ ಗೋದ್ರಾ ಮಾದರಿಯ ಹತ್ಯಾಕಾಂಡಕ್ಕೆ ಸಂಚು, ಅಯೋಧ್ಯೆಗೆ ಹೋಗುವವರಿಗೆ ಭದ್ರತೆ ಕೊಡಬೇಕೆಂದು ಹೇಳಿಕೆ ನೀಡಿರುವ ಬಿ.ಕೆ.ಹರಿಪ್ರಸಾದ್ ಅವರ ಮೇಲೆ ಕಿಡಿ ಕಾರಿದ ಸಂಸದ ನಳಿನ್ ಕುಮಾರ್ ಕಟೀಲು ಅವರು, ತಕ್ಷಣ ಹರಿಪ್ರಸಾದ್ ಬಂಧನವಾಗಲಿ ಎಂದು ಸರಕಾರವನ್ನು ಆಗ್ರಹಿಸಿದರು.
Stomach Pain: ತಿಂದ ಕೂಡಲೇ ಹೊಟ್ಟೆ ನೋವಾಗುತ್ತ.? ಹಾಗಾದ್ರೆ ಈ ಮನೆ ಮದ್ದು ಟ್ರೈ ಮಾಡಿ
ಈ ಬಗ್ಗೆ ಸಿಎಂ, ಗೃಹಸಚಿವರು, ಉಪ ಮುಖ್ಯಮಂತ್ರಿಗಳು ತಮಗೇನು ಗೊತ್ತಿಲ್ಲ ಎನ್ನುತ್ತಿದ್ದಾರೆ. ಬಿ.ಕೆ.ಹರಿಪ್ರಸಾದ್ ತಮ್ಮಲ್ಲಿರುವ ಮಾಹಿತಿಯನ್ನು ಗೃಹ ಇಲಾಖೆಗೆ ನೀಡಲಿ. ಇಲ್ಲದಿದ್ದಲ್ಲಿ ತಕ್ಷಣ ಅವರ ಬಂಧನವಾಗಲಿ. ಏಕೆಂದರೆ ಗೋದ್ರಾ ಘಟನೆಯ ಹಿಂದೆ ಕಾಂಗ್ರೆಸ್ ಇತ್ತು. ಮೋದಿ ಸರಕಾರವನ್ನು ಬೀಳಿಸಬೇಕೆಂಬ ಕುತಂತ್ರವನ್ನು ಆಗ ಕಾಂಗ್ರೆಸ್ ಮಾಡಿತ್ತು. ಇಂದು ಮತ್ತೆ ಈ ಹೇಳಿಕೆಯನ್ನು ಹರಿಪ್ರಸಾದ್ ಹೇಳಿದ್ದಾರೆಂದರೆ ಈ ಷಡ್ಯಂತ್ರವನ್ನು ಕಾಂಗ್ರೆಸ್ ಮಾಡಿತ್ತು ಎಂದು ಆರೋಪಿಸುತ್ತೇನೆ ಎಂದರು.