ಕೋಲಾರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಡಿಕೆ ಸುರೇಶ್ ಅವರು ಸೋಲಲು ಸಿಎಂ ಸಿದ್ದರಾಮಯ್ಯನವರೇ ಕಾರಣ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ತಮ್ಮ ಪ್ರತಿಸ್ಪರ್ಧಿಗಳನ್ನು ಸೋಲಿಸಿ, ಅವರ ಬಲವನ್ನು ಕುಗ್ಗಿಸುವಂಥ ಕೆಲಸಗಳನ್ನು ಈ ಹಿಂದೆಯೂ ಮಾಡಿದ್ದರು.
ಅದೇ ಕೆಲಸವನ್ನು ಈಗಲೂ ಮಾಡಿದ್ದಾರೆ ಎಂದು ಅವರು ಆರೋಪಿಸಿದರು. ತಮ್ಮ ಆರೋಪಗಳಿಗೆ ಪೂರಕವೆಂಬಂತೆ ಪರಮೇಶ್ವರ್ ಅವರ ಉದಾಹರಣೆಯನ್ನು ಕೊಟ್ಟ ಅಶೋಕ್, “ಈ ಹಿಂದೆ, ಮುಖ್ಯಮಂತ್ರಿ ಹುದ್ದೆಗೆ ತಮ್ಮ ಪ್ರತಿಸ್ಪರ್ಧಿಯಾಗಿದ್ದ ಜಿ. ಪರಮೇಶ್ವರ ಅವರನ್ನು ಮಧುಗಿರಿ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಸೋಲುವಂತೆ ಮಾಡಿದ್ದರು.
![Demo](https://ainlivenews.com/wp-content/uploads/2023/12/spoorthi-1.jpg)
Yes Bank Lays Off: 500 ನೌಕರರನ್ನು ಕೆಲಸದಿಂದ ವಜಾಗೊಳಿಸಿದ Yes ಬ್ಯಾಂಕ್..! ಕಾರಣ ಹೀಗಿದೆ..
ಈಗ, ಸಿಎಂ ಹುದ್ದೆಗೆ ಪ್ರತಿಸ್ಪರ್ಧಿಯಾಗಿರುವ ಡಿಕೆ ಶಿವಕುಮಾರ್ ಅವರ ಬಲವನ್ನು ಕುಗ್ಗಿಸಲು ಅವರ ಸಹೋದರ ಡಿಕೆ ಸುರೇಶ್ ಅವರನ್ನು ಸೋಲಿಸಿದ್ದಾರೆ. ಆದರೆ, ಇದರಿಂದ ಎಚ್ಚೆತ್ತಿರುವ ಡಿಕೆಶಿ ಅವರು, ರಾಜ್ಯ ರಾಜಕೀಯದಲ್ಲಿ ಚದುರಂಗದಾಟ ಶುರು ಮಾಡಿದ್ದಾರೆ ಎಂದು ಅವರು ಹೇಳಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)