ಬೆಂಗಳೂರು:- ಸಿದ್ದರಾಮಯ್ಯ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆರ್ ಅಶೋಕ್ ಹೇಳಿದ್ದಾರೆ.
ಗಯಾನಾದಲ್ಲಿ ಮಳೆ.. ಇಂಡಿಯಾ V/s ಇಂಗ್ಲೆಂಡ್ ಪಂದ್ಯದ ಟಾಸ್ ವಿಳಂಬ.!
ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟು ಕೊಡಿ ಎಂಬ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿ, ಸಿಎಂ ಸಿದ್ದರಾಮಯ್ಯ ಅವರು ಇಷ್ಟೊಂದು ಅವಮಾನ ಮಾಡಿಸಿಕೊಂಡು ಸಿಎಂ ಸ್ಥಾನದಲ್ಲಿ ಮುಂದುವರೆಯೋದು ಬೇಡ. ಕೂಡಲೇ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದರು.
ಈ ವೇಳೆ ಕರೆದು ಅದೇನು ಆಯ್ತು ಎನ್ನುವ ಗಾದೆ ರೀತಿ ಸ್ವಾಮೀಜಿ ಮಾತಾಗಿದೆ. ಸಿದ್ದರಾಮಯ್ಯ ಡಿಸಿಎಂ ತಂತ್ರಕ್ಕೆ ಇದು ಡಿಕೆಶಿ ಪ್ರತಿತಂತ್ರ. ಶಿವಕುಮಾರ್ ತಮ್ಮನ ಸೋಲು ಸಹಿಸಲು ಅಗ್ತಿಲ್ಲ. ಡಿ.ಕೆ ಸುರೇಶ್ ಸೋಲಿಸಿದ್ದು ಯಾರು ಎಂದು ಗೊತ್ತಾಗಿದೆ. ಹೀಗಾಗಿ ಅದಕ್ಕೆ ಕೌಂಟರ್ ಆಗಿ ಸ್ವಾಮೀಜಿ ಹೇಳಿಕೆ ಬಂದಿದೆ ಎಂದು ಅವರು ಹೇಳಿದ್ದಾರೆ.
ಹೆಚ್ಚುವರಿ ಡಿಸಿಎಂ ಬಗ್ಗೆ ಸಿದ್ದರಾಮಯ್ಯ ಬಣದವರು ಮಾತಾಡಿದ್ದರು, ಅದಕ್ಕೆ ಇದು ಕೌಂಟರ್. ಸಿಎಂ ಧರ್ಮಾತ್ಮರಾಗಿದ್ದರೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಸ್ವಾಮೀಜಿ ಹೇಳಿದ್ದಾರೆ. ಇದಕ್ಕೆ ಕಾಂಗ್ರೆಸ್ನವರು ಉತ್ತರ ಕೊಡಬೇಕು. ಸಿದ್ದರಾಮಯ್ಯಗೆ ಗೌರವ ಇದ್ದರೆ ರಾಜೀನಾಮೆ ಕೊಡೋದು ಒಳ್ಳೆಯದು. ಇಷ್ಟು ಅವಮಾನ ಆದ ಮೇಲೆ ಅವರು ಸಿಎಂ ಸ್ಥಾನದಲ್ಲಿ ಇರೊಲ್ಲ ಅಂತ ಎನಿಸುತ್ತದೆ ಎಂದಿದ್ದಾರೆ.
ಇದು ಈ ಸರ್ಕಾರದ ಬೇಗುದಿ. ಈಗ ಒಂದೊಂದೇ ಹೊರಗೆ ಬರುತ್ತಿದೆ. ಡಿಕೆ ಗ್ರೂಪ್ ಮತ್ತು ಸಿಎಂ ಗ್ರೂಪ್ ನಡುವೆ ವಾರ್ ನಡೆಯುತ್ತಿದೆ. ಇವರಿಂದ ನಯಾಪೈಸೆ ಅಭಿವೃದ್ಧಿ ಆಗಿಲ್ಲ. ಕಾಂಗ್ರೆಸ್ನಲ್ಲಿ ಗೊಂದಲ ಇದೆ. ಸರ್ಕಾರಕ್ಕೆ ಆಪತ್ತು ಇದೆ ಎಂದು ಗೊತ್ತಾಗಿದೆ. ಇದರಿಂದಲೇ ಜಾಸ್ತಿ ದಿನ ಈ ಸರ್ಕಾರ ಇರುವುದಿಲ್ಲ ಎಂದು ಹೇಳಿದ್ದೆ ಎಂದಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)