ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಿ ತಮ್ಮ ಪದವಿ ಹೋಗುತ್ತದೆ ಎಂಬ ಭಯದಲ್ಲಿ ರಾಹುಲ್ ಗಾಂಧಿ ಮುಂದೆ ಮಾತನಾಡುವುದಿಲ್ಲ, ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಹೇಳೋಕ್ಕೆ ಸಿದ್ದರಾಮಯ್ಯ ಭಯ ಪಡುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಪಹಾಸ್ಯ ಮಾಡಿದ್ದಾರೆ.
ನಗರದಲ್ಲಿಂದು ರಾಜ್ಯದ ಬಿಜೆಪಿ ಸಂಸದರು ಪುಕ್ಕಲರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಅವರ ಬಳಿಯೇ ಕಾಂಗ್ರೆಸ್’ನವರು ಮಾತನಾಡುವುದಿಲ್ಲ, ಅಭಿವೃದ್ದಿ ಹಾಗೂ ಬರ ಪರಿಹಾರದ ವಿಚಾರದಲ್ಲಿ ಈವರೆಗೂ ಯಾವುದೇ ವರದಿಯನ್ನು ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗಿಲ್ಲ, ಈ ಬಗ್ಗೆ ಬಹಿರಂಗ ಚರ್ಚೆಯ ಮೂಲಕ ಕಾಂಗ್ರೆಸ್’ನವರಿಗೆ ಉತ್ತರ ನೀಡಲಾಗಿದೆ ಎಂದರು.
PUC ಮತ್ತು SSLC ಪಾಸಾದವರಿಗೆ ನವೋದಯ ವಿದ್ಯಾಲಯದಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
ಸಿದ್ಧರಾಮಯ್ಯ ಅವರು ವಿಧಾನಸಭೆಯ ಮೂಡ್ ನಿಂದ ಇನ್ನೂ ಹೊರ ಬಂದಿಲ್ಲ. ಇನ್ನೂ ಅವರು ವಿಧಾನಸಭೆ ಚುನಾವಣೆ ಅಂತಾ ತಿಳಿದುಕೊಂಡಿದ್ದಾರೆ. ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಮಾತನಾಡುತ್ತಿಲ್ಲ ಪ್ರಧಾನಿಗಳು ವಿಕಸಿತ ಭಾರತದ ಬಗ್ಗೆ ಮಾತನಾಡುತ್ತಾರೆ. ಆದ್ರೆ ಕೇವಲ ಯಾವುದೋ ಒಂದು ರಾಜಕಾರಣದ ವಿಷಯದ ಬಗ್ಗೆ ಸಿದ್ಧರಾಮಯ್ಯ ಮಾತನಾಡುತ್ತಾರೆ. ಯಾವುದೇ ಚರ್ಚೆಗಳನ್ನ ಅವರು ಮಾಡಲ್ಲ,
75 ವರ್ಷದ ಇತಿಹಾಸದಲ್ಲಿ 50 ವರ್ಷಗಳ ಕಾಲ ಬಹುಮತದೊಂದಿಗೆ 8 ವರ್ಷ ಬಹುಮತ ಇಲ್ಲದ ಸರ್ಕಾರ ನಡೆಸಿದ್ದಾರೆ. ಆದ್ರೆ ಸದ್ಯದ ಸ್ಥಿತಿಯಲ್ಲಿ ಅರ್ಧಕ್ಕಿಂತ ಕಡಿಮೆ ಸ್ಪರ್ಧೆ ಮಾಡುತ್ತಿದ್ದಾರೆ. ಯಾಕೆ ಈ ಸ್ಥಿತಿ ಬಂದಿದೆ ಅನ್ನುವುದನ್ನು ಕಾಂಗ್ರೆಸ್ಸಿಗರು ಮನವರಿಕೆ ಮಾಡಿಕೊಳ್ಳಬೇಕು. ಕೇವಲ ಸನಾತನ ಧರ್ಮದ ವಿರುದ್ಧ ಹಿಂದುತ್ವದ ವಿರುದ್ಧ ಮಾತನಾಡುತ್ತಾರೆ ಎಂದರು.