ಶಿರಸಿ : ‘ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದ ಸ್ಥಿರವಾದ ಸರಕಾರ ಇದೆ. ನನ್ನ ಸ್ನೇಹಿತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಭವಿಗಳು ಜನಪ್ರಿಯ ನಾಯಕರು ಆಗಿದ್ದು ಅವರ ನೇತೃತ್ವದಲ್ಲಿ ಸರಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದು ಕಾಂಗ್ರೆಸ್ ಮುಖಂಡ ಆರ್ ವಿ ದೇಶಪಾಂಡೆ ಹೇಳಿದರು.
Onam 2024: ಓಣಂ ಹಬ್ಬಆಚರಿಸುವ ವಿಧಾನ, ಹಿಂದಿನ ಮಹತ್ವ ಮತ್ತು ವಿಶೇಷತೆ ಏನು ಗೊತ್ತಾ..?
ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಐದು ವರ್ಷ ಕಾಲ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ. ಈಗ ಸರಕಾರಕ್ಕೆ ಪಕ್ಷಕ್ಕೆ ಒಳ್ಳೆಯ ಹೆಸರು ಬರುತ್ತಿದೆ. ಇಂಥ ಸಂದರ್ಭದಲ್ಲಿ ಬೇರೆಯವರು ಮುಖ್ಯಮಂತ್ರಿ ಆಗುವ ವಿಷಯವೇ ಇಲ್ಲ. ಪಕ್ಷದ ಶಿಸ್ತಿನ ಸಿಪಾಯಿಯಾಗಿ ನಾನು ಮುಂದುವರೆಯುತ್ತೇನೆ’ ಎಂದರು.