ಶಿವಮೊಗ್ಗ:– ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ವಿಷ್ಣು ಅಳಿಯ ಅನಿರುದ್ ಅವರು ಭೇಟಿ ಮಾಡಿದ್ದಾರೆ. ಭೇಟಿ ವೇಳೆ ತುಂಗಾ ನದಿ ನೀರು ಸ್ವಚ್ಛತೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದ್ದಾರೆ.
13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಹಂತಕರು!
ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿರುವ ನಟ ಅನಿರುದ್ಧ ಮನವಿ ಸಲ್ಲಿಸಿದ್ದಾರೆ. ಇದನ್ನು ಸಿಎಂ ಆಫ್ ಕರ್ನಾಟಕ ಟ್ವೀಟ್ ಮಾಡಿದ್ದು, ನಟ ಅನಿರುದ್ಧ್ ಅವರು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತುಂಗಾ ನದಿ ನೀರು ಸ್ವಚ್ಛತೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದರು.
ಈ ವೇಳೆ ಮುಖ್ಯಮಂತ್ರಿಗಳು ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಕರೆ ಮಾಡಿ ತುಂಗಾ ನದಿ ಸ್ವಚ್ಚತೆ ಕಡೆಗೆ ಗಮನ ಹರಿಸುವಂತೆ ಸೂಚಿಸಿದರು ಎಂದು ಬರೆಯಲಾಗಿದೆ.
ಮಲೀನ ನೀರು ನದಿಗೆ ಬಿಡದಂತೆ ಜಿಲ್ಲಾಡಳಿತ ಗಮನ ಹರಿಸಲು ನಟ ಅನಿರುದ್ಧ ಒತ್ತಾಯಿಸಿದ್ದರು. ಇದೇ ತುಂಗಾ ನೀರು ಹರಿಹರ, ಹೊಸಪೇಟೆ, ಮಂತ್ರಾಲಯಕ್ಕೆ ಹೋಗುತ್ತದೆ. ತುಂಗಾ ನದಿ ನೀರು ಪವಿತ್ರವಾಗಿದೆ ಎಂದು ಎಲ್ಲರೂ ಪೂಜೆ ಮಾಡುತ್ತಾರೆ. ಆದರೆ ಇಂತಹ ಮಲೀನ ನೀರು ಮುಂದಿನ ಜಿಲ್ಲೆಗಳಿಗೆ ಹೋಗುತ್ತಿರುವುದು ಸರಿಯಲ್ಲ.
ಶಿವಮೊಗ್ಗದ ತುಂಗಾ ನದಿಗೆ ನೇರವಾಗಿ ಮಲೀನ ನೀರು ಸೇರ್ಪಡೆ ಆಗುತ್ತದೆ. ಶಿವಮೊಗ್ಗ ನಗರದ ತ್ಯಾಜ್ಯ ಮತ್ತು ಮಲೀನ ನೀರು ನೇರವಾಗಿ ನದಿಗೆ ಸೇರುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಗಂಗಡಿಕಲ್ಲು ಗ್ರಾಮದಲ್ಲಿ ತುಂಗಾ ನದಿ ಉಗಮ ಸ್ಥಾನವಾಗಿದೆ. ಶೃಂಗೇರಿ ಮತ್ತು ತೀರ್ಥಹಳ್ಳಿ ಪಟ್ಟಣದ ಮತ್ತು ಸುತ್ತುಮುತ್ತಿನ ಗ್ರಾಮದ ಮಲೀನ ನೀರು ನೇರವಾಗಿ ತುಂಗಾ ನದಿಗೆ ಸೇರುತ್ತಿದೆ.
ತುಂಗಾ ನದಿ ನೋಡಲು ಮಾತ್ರ ತುಂಬಾ ಸುಂದರವಾಗಿದೆ. ಆದರೆ ನದಿಯ ನೀರು ಸಂಪೂರ್ಣವಾಗಿ ಕಲುಷಿತಗೊಂಡಿದೆ. ತುಂಗಾ ನದಿಗೆ ಸೇರುತ್ತಿರುವ ತ್ಯಾಜ್ಯ ಮತ್ತು ಮಲೀನ ನೀರು ಬಿಡದಂತೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕಿದೆ.