ಬೆಂಗಳೂರು:– ಇಂದು ರಾಜ್ಯ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ ಅವರು, ಲೋಕಸಭಾ ಚುನಾವಣೆ ದೃಷ್ಟಿಯಲ್ಲಿ ಮಹತ್ವದ ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ. ಆದರೆ, ಗ್ಯಾರಂಟಿ ಯೋಜನೆಗಳ ಜೊತೆಗೆ ಹೊಸ ಯೋಜನೆ ನೀಡುವ ದೊಡ್ಡ ಸವಾಲು ಸಿದ್ದರಾಮಯ್ಯ ಮುಂದೆ ಇದ್ದು, ಬಜೆಟ್ ಗಾತ್ರ ಮತ್ತು ಸಾಲದ ಹೊರೆ ಹೆಚ್ಚಾಗಲಿದೆ.
ಸಿದ್ದರಾಮಯ್ಯ ಬಜೆಟ್ ನೀರಿಕ್ಷೆಗಳು
7ನೇ ವೇತನ ಆಯೋಗದ ವರದಿಯಲ್ಲಿನ ಕೆಲ ಅಂಶಗಳ ಘೋಷಣೆ ಸಾಧ್ಯತೆ
ಮದ್ಯದ ಮೇಲಿನ ಸುಂಕ ಏರಿಕೆ ಸಾಧ್ಯತೆ
ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ ವಿಶೇಷ ಹಣ ಮೀಸಲು
ಬೆಂಗಳೂರಿನಲ್ಲಿ ಟನಲ್ ನಿರ್ಮಾಣಕ್ಕೆ ಅನುದಾನ
ನಮ್ಮ ಮೆಟ್ರೋ ಮಾರ್ಗ ವಿಸ್ತರಣೆ ಹೆಚ್ಚಿನ ಅನುದಾನ ಬಿಡುಗಡೆ ಸಾಧ್ಯತೆ
ಮೇಕೆದಾಟು ಯೋಜನೆಗೆ ಹಣ ಘೋಷಣೆ ಸಾಧ್ಯತೆ
100 ಕೋಟಿ ರೂಪಾಯಿ ವೆಚ್ಚದಲ್ಲಿ ದೇವಸ್ಥಾನಗಳ ಅಭಿವೃದ್ಧಿ ಕಾರ್ಯ
ಸುವರ್ಣ ಮಹೋತ್ಸವ ಹೆಸರಿನಲ್ಲಿ ಹಲವು ಅಭಿವೃದ್ಧಿ ಪೂರಕ ಯೋಜನಗಳು ತರುವ ಸಾಧ್ಯತೆ
ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಸಿದ್ದರಾಮಯ್ಯ ಬಜೆಟ್ ಮಂಡನೆ ಸಾಕಷ್ಟು ಕೂತಹಲ ಮೂಡಿಸಿದೆ. ಐದು ಗ್ಯಾರಂಟಿ ಹಾಗೂ ಬರ ನಿರ್ವಹಣೆಗೆ ಹೆಚ್ಚಿನ ಹಣ ಹೊಂದಿಸುವ ಅನಿರ್ವಾಯತೆ ಇದೆ. ಸಾರ್ವಜನಿಕರಿಗೆ ಹೊರ ಹಾಕದೇ ಸಮತೋಲನ ಬಜೆಟ್ ಮಂಡಿಸುವ ಸವಾಲು ಸಿದ್ದರಾಮಯ್ಯ ಮುಂದಿದೆ.
ಬಜೆಟ್ನಲ್ಲಿ ಮದ್ಯದ ಮೇಲಿನ ಸುಂಕವನ್ನು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಆ ಮೂಲಕ ಆದಾಯ ಕ್ರೋಢೀಕರಣಕ್ಕೆ ಸಿದ್ದರಾಮಯ್ಯ ಕ್ರಮಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯದಲ್ಲಿ ಹಲವು ಬಾರಿ ಮದ್ಯದ ದರ ಏರಿಕೆ ಮಾಡಲಾಗಿದ್ದು, ಕಳೆದ ಬಜೆಟ್ನಲ್ಲಿ ಹಾರ್ಡ್ ಲಿಕ್ಕರ್ ಬೆಲೆ ಶೇ.20ರಷ್ಟು ಏರಿಕೆಯಾಗಿತ್ತು. ಕಳೆದ ಬಜೆಟ್ನಲ್ಲಿ ಬಿಯರ್ ಸುಂಕ ಶೇ.185ಕ್ಕೆ ಏರಿಕೆ ಆಗಿತ್ತು. ಈ ಬಾರಿಯೂ ಬಜೆಟ್ನಲ್ಲಿ ಮದ್ಯದ ಸುಂಕ ಹೆಚ್ಚಳ ಸಾಧ್ಯತೆ ಇದೆ.
ಗ್ಯಾರಂಟಿ ಯೋಜನೆಗಾಗಿ ಸಂಪನ್ಮೂಲಗಳ ಕೃಡೀಕರಣಕ್ಕಾಗಿ ಕೆಲವು ವಿಭಾಗದಲ್ಲಿ ತೆರಿಗೆ ಹೆಚ್ಚಳ ಮಾಡುತ್ತಾರೆ ಎನ್ನಲಾಗಿದೆ. ಆದರೆ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ತೆರಿಗೆ ಹೆಚ್ಚಳ ಮಾಡಿದರೆ ಹೇಗೆ ಎಂಬ ಭಯ ಸರ್ಕಾರಕ್ಕೆ ಇದೆ. ಹೀಗಾಗಿ ತೆರಿಗೆ ಹೆಚ್ಚಳ ಮಾಡದೇ ಬಜೆಟ್ ಮಂಡಿಸುವ ಸವಾಲು ಸಿದ್ದರಾಮಯ್ಯ ಅವರ ಮುಂದಿದೆ.