ಬೆಂಗಳೂರು:– ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಹೆಚ್ ಡಿ ರೇವಣ್ಣ ಅವರ SIT ಕಸ್ಟಡಿ ಇಂದು ಅಂತ್ಯವಾಗಲಿದೆ.
ಕಿಡ್ನ್ಯಾಪ್ ಕೇಸ್: ಮಾಜಿ ಸಚಿವ ಹೆಚ್ ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರು.. ಆಸ್ಪತ್ರೆಯಲ್ಲಿ 2 ಗಂಟೆ ಚಿಕಿತ್ಸೆ!
ಎಸ್ಐಟಿ ಕಸ್ಟಡಿಯಲ್ಲಿರುವ ರೇವಣ್ಣ ಜಾಮೀನಿಗೆ ಅವರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಕಸ್ಟಡಿಯಲ್ಲಿರೋ ವ್ಯಕ್ತಿಗೆ ಜಾಮೀನು ಕೊಡುವುದು ಹೇಗೆ ಅಂತ ನ್ಯಾಯಾಧೀಶರು ರೇವಣ್ಣ ಪರ ವಕೀಲರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ವಕೀಲರು ವಾದ ಮುಂದಿಟ್ಟಿದ್ದಾರೆ. ಆದರೂ ಈ ಬಗ್ಗೆ ಎಸ್ಐಟಿ ಪ್ರತಿಕ್ರಿಯಿಸಲಿ ಅಂತಾ ಎಸ್ಐಟಿಗೆ ನೋಟಿಸ್ ನೀಡಿ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು. ಕಿಡ್ನ್ಯಾಪ್ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿರುವ ರೇವಣ್ಣ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಲಿದೆ. ಹೀಗಾಗಿ ರೇವಣ್ಣಗೆ ಇಂದು ನಿರ್ಣಾಯಕ ದಿನ ಆಗಿದೆ. ರೇವಣ್ಣಗೆ ಬೇಲ್ ಸಿಗುತ್ತಾ? ಮತ್ತೆ ಕಸ್ಟಡಿಗೆ ತೆಗೆದುಕೊಳ್ತಾರಾ? ಅಥವಾ ಜೈಲು ಪಾಲಾಗ್ತಾರಾ ಅನ್ನೋದು ಕುತೂಹಲ ಮೂಡಿಸಿದೆ.
ಮತ್ತೊಂದು ಕಡೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳಿಗೆ ರೇವಣ್ಣ ಉತ್ತರವೇ ತಲೆ ಬಿಸಿ ತಂದಿದೆ. ಎಸ್ಐಟಿ ಅಧಿಕಾರಿಗಳು ಎಷ್ಟೇ ಪ್ರಶ್ನೆ ಕೇಳಿದರೂ, ರೇವಣ್ಣ ಮಾತ್ರ ಒಂದೇ ಉತ್ತರ ಕೊಡ್ತಿದ್ದಾರೆ. ಕಿಡ್ನಾಪ್ ಕೇಸ್ಗೂ ತನಗೂ ಸಂಬಂಧವೇ ಇಲ್ಲ. ಪದೇ ಪದೆ ಹೇಳಿದ್ದೇ ತಡ, ಕಿಡ್ನ್ಯಾಪ್ ಕೇಸ್ನ 2ನೇ ಆರೋಪಿ ಸತೀಶ್ ಬಾಬಣ್ಣನನ್ನು ಒಟ್ಟಿಗೆ ಕೂರಿಸಿ ಎಸ್ಐಟಿ ವಿಚಾರಣೆ ನಡೆಸಿ, ಪ್ರಕರಣ ಸಂಬಂಧ ಒಂದಿಷ್ಟು ಮಾಹಿತಿ ಕಲೆ ಹಾಕಿದೆ. ವಿಚಾರಣೆ ವೇಳೆ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಪ್ರಶ್ನೆಗಳು ಸುರಿಮಳೆಗೈದಿದ್ದಾರೆ. ಸತೀಶ್ ನಿಮಗೆ ಎಷ್ಟು ವರ್ಷದಿಂದ ಪರಿಚಯ ಇದೆ. ಸತೀಶ್ಗೆ ನೀವು ಸಂತ್ರಸ್ತೆಯನ್ನು ಕರೆದುಕೊಂಡು ಬರಲು ಹೇಳಿಲ್ವಾ. ಕಿಡ್ನ್ಯಾಪ್ ಯಾಕೆ ಮಾಡಿಸಿದ್ದು. ಕಿಡ್ನ್ಯಾಪ್ ಹಿಂದೆ ಏನೆಲ್ಲಾ ಪ್ಲ್ಯಾನ್ ಇತ್ತು ಎಂಬೆಲ್ಲಾ ಪ್ರಶ್ನೆ ಕೇಳಿದ್ದಾರೆ.