ದೊಡ್ಡಬಳ್ಳಾಪುರ: ತೋಟದ ಮನೆಯಲ್ಲಿ ವಾಸವಿದ್ದ ಮಗುವಿಗೆ ಹಾವು ಕಡಿದು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಅನುಷಾ (7) ಟಿ ಹೊಸಹಳ್ಳಿ ಗ್ರಾಮದ ರಾಮಾಂಜಿ ಎನ್ನುವವರ ಮಗಳು ಮೃತ ದುರ್ದೈವಿಯಾಗಿದ್ದು, ವಿನೋದಮ್ಮ ಮತ್ತುರಾಮಾಂಜಿನಪ್ಪ ದಂಪತಿಗಳು ಕೋಳೂರು ಗ್ರಾಮದ ತೋಟದ ಮನೆಯೋಂದರಲ್ಲಿ ಕೂಲಿ ಕೆಲಸ ಮಾಡಿಕೊಂಡು ವಾಸವಿದ್ದರು.
Post Office Jobs: ಅಂಚೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ.! 10th ಪಾಸಾಗಿದ್ರೆ ಸಾಕು – ಇಂದೇ ಅರ್ಜಿ ಸಲ್ಲಿಸಿ
ನಿನ್ನೆ ಸಂಜೆ ತಂದೆ ತಾಯಿ ತೋಟದ ಕೇಲಸ ಮಾಡುವ ವೇಳೆ ಆಟವಾಡುತ್ತಿದ್ದ ಮಗುವಿಗೆ ಹಾವು ಕಚ್ಚಿದೆ. ಕೂಡಲೆ ಅಸ್ವಸ್ಥಗೊಂಡಿದ್ದನ್ನು ಗಮನಿಸಿದ ಪೋಷಕರು ದೊಡ್ಡಬಳ್ಳಾಪುರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಇನ್ನು ಈ ಘಟನೆ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.