Facebook Twitter Instagram YouTube
    ಕನ್ನಡ     English     తెలుగు
    Sunday, July 3
    Facebook Twitter Instagram YouTube
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ     English     తెలుగు
    Facebook Twitter Instagram YouTube
    Home»ಬೆಂಗಳೂರು»ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ-ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ

    ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ-ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ

    ain userBy ain user
    Share
    Facebook Twitter LinkedIn Pinterest Email

    ಬೆಂಗಳೂರು: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಲೇಬೇಕು ಈ ನಿಟ್ಟಿನಲ್ಲಿ ಸರ್ಕಾರ ಕ್ರಿಯಾಶೀಲವಾಗಿದೆ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಾವೆಲ್ಲರೂ ಒಗ್ಗೂಡಿ ಪ್ರಯತ್ನಿಸಬೇಕಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ವತಿಯಿಂದ ಮನವಿ ಸ್ವೀಕರಿಸಿ ಮಾತಾಡಿದ ಅವರು, ವೇದಿಕೆಯ ಮನವಿಯಂತೆ ಸುಮಾರು 73 ಅತಿ ಹಿಂದುಳಿದ ಜಾತಿಗಳನ್ನು ಗುರುತಿಸಿ ಒಬಿಸಿ ಪಟ್ಟಿಯಲ್ಲಿ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ. ದೇವರಾಜು‌ ಅರಸು ಸಂಶೋಧನಾ ಪೀಠಕ್ಕೆ  ಅನುಧಾನ ನೀಡಲಾಗುತ್ತದೆ.

    ಬಲಾಡ್ಯ ಸಮುದಾಯಗಳೂ ಸಹ ಆರ್ಥಿಕವಾಗಿ ಹಿಂದುಳಿದಿರುವುದಾಗಿ ಅಹವಾಲನ್ನು ಕೊಡುತ್ತವೆ, ಆದರೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಆರ್ಥಿಕವಾಗಿ ಹಿಂದುಳಿದಿರುವ ಸಮುದಾಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಇನ್ನು ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಕುರಿತಾಗಿ ಹೆಚ್ಚಿನ ಆದ್ಯತೆ ನೀಡಬೇಕಾದ ಅಗತ್ಯವಿದೆ. ದೇವರಾಜ ಅರಸು ಅವರ ಇಲ್ಲದವರಿಗೆ ಭೂಸುಧಾರಣೆ ಯೋಜನೆಯ ಫಲಾನುಭವಿ ನಾನು, ಅವತ್ತು ನನಗೆ ೨ ಎಕರೆ ಭೂಮಿ ಸಿಕ್ಕಿತ್ತು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಮರಿಸಿಕೊಂಡರು.

    Demo

     

    ಅತಿ ಹಿಂದುಳಿದ ವರ್ಗಗಳಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಾತಿ ವಿಚಾರವಾಗಿ ಯಾರಿಗೂ ಅನ್ಯಾಯವಾಗದಂತೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವರು, ಈಗಾಗಲೇ ಹಿಂದುಳಿದ ಆಯೋಗದ ಅಧ್ಯಕ್ಷರು ಹಲವು ಸಮುದಾಯಗಳ ಪ್ರಸ್ತಾಪವನ್ನು ಪರಿಶೀಲಿಸುತ್ತಿದ್ದಾರೆ. ನಮ್ಮ ಸಮಾಜ ಇನ್ನೂ ಹೆಸರೇ ಕೇಳದ, ಅತ್ಯಂತ ಕಡಿಮೆ ಜನಸಂಖ್ಯೆ ಹೊಂದಿರುವ ಅದೆಷ್ಟೋ ಸಮುದಾಯಗಳ ಬದುಕು ಬದುಕು ದಾರುಣವಾಗಿದೆ. ಸ್ಥಳೀಯ ಸಂಸ್ಥೆಗಳ ಆಡಳಿತದಲ್ಲಿ ಮೀಸಲಾತಿ ವಿಚಾರದಲ್ಲಿ ಮುಂದಿನ ೧೫ ದಿನಗಳಲ್ಲಿ ಸಭೆ ಕರೆದು ಚರ್ಚೆ ಮಾಡುತ್ತೇವೆ ಎಂದು ಭರವಸೆ ನೀಡಿದರು. ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಂ ಸಿ ವೇಣುಗೋಪಾಲ ಮಾತನಾಡಿ ಒಂದು ವೇಳೆ ವೀರಶೈವ ಲಿಂಗಾಯಿತದ ಉಪಜಾತಿಯಾದ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-೨ಎ ಪಟ್ಟಿಗೆ ಸೇರಿಸಿದರೆ ಹಿಂದುಳಿದ ಸಮುದಾಯಗಳು ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಎಚ್ಚರಿಸಿದರು.

     

    ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಪಿ.ಆರ್‌ ರಮೇಶ್‌, ಮಾಜಿ ಶಾಸಕ ಹಾಗೂ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ನರೇಂದ್ರ ಬಾಬು, ಮುಂತಾದ ಹಲವರು ಮಾತನಾಡಿ, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡಲು ತಾಂತ್ರಿಕ ಅಡೆತಡೆಯಿದೆ. 2ಎ ಮೀಸಲಾತಿ ನೀಡಿದರೆ ಅತಿ ಹಿಂದುಳಿದ ಸಮುದಾಯಕ್ಕೆ ಘೋರ ಅನ್ಯಾಯವಾಗುತ್ತದೆ. ಪಂಚಮಸಾಲಿ ಸಮುದಾಯವನ್ನು ಪ್ರವರ್ಗ ೨ಎಗೆ ಸೇರಿಸಬಾರದೆಂದು ಎಂದು ಒಕ್ಕೂರಲಿನಿಂದ ಸಚಿವರ ಬಳಿ ಮನವಿ ಮಾಡಿಕೊಂಡರು.

     

    ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಬಳಿ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಸರ್ಕಾರದ ಗಮನ ಸೆಳೆಯುವಂತೆ ಒತ್ತಾಯಿಸಿ, ಪ್ರಮುಖ ಬೇಡಿಕೆಗಳ ಮನವಿ ಪತ್ರ ನೀಡಲಾಯಿತು. ಹೆಚ್. ಕಾಂತರಾಜ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿರುವ ಸಮಾಜೋ-ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಕೂಡಲೇ ಸ್ವೀಕರಿಸಿ ಬಹಿರಂಗ ಪಡಿಸಬೇಕು. ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಯ  ಪ್ರವರ್ಗ-2ಎಗೆ ಸೇರ್ಪಡೆ ಗೊಳಿಸಬಾರದು.  ನ್ಯಾಯಮೂರ್ತಿ ಸುಭಾಷ್ ಆಡಿ ಸಮಿತಿಯಿಂದ ಪಂಚಮಸಾಲಿ ವಿಷಯ ಹಿಂಪಡೆಯಬೇಕು. ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸುಮಾರು 70 ಜಾತಿ-ಉಪಜಾತಿಗಳನ್ನು ಸೇರ್ಪಡೆಗೆ ಶಿಫಾರಸ್ಸು ಮಾಡಬೇಕು. ಸ್ಥಳೀಯ ಸಂಸ್ಥೆಗಳ ಆಡಳಿತದಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ‌ ನೀಡಬೇಕು. ಸಮಾಜದ ಅಲಕ್ಷಿತ ಅತಿ ಹಿಂದುಳಿದ ಸಮುದಾಯಗಳ ಸಾಮಾಜಿಕ ಸುಧಾರಣೆಗೆ ಸರ್ಕಾರ ಬದ್ಧವಾಗಬೇಕು ಎನ್ನುವ ಆಗ್ರಹ ಮಂಡಿಸಿ ಮನವಿ ನೀಡಲಾಯಿತು.

     

    ಇನ್ನು ಸಭೆಗೂ ಮುನ್ನ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ೨ನೇ ಕಾರ್ಯಕಾರಿ ಮಂಡಳಿ ಸಭೆ ನಡೆಯಿತು. ಇತ್ತೀಚೆಗೆ ನಿಧನರಾದ ಹಿರಿಯ ಮುತ್ಸದ್ದಿ ರಾಜಕಾರಣಿ, ಮಾಜಿ ರಾಜ್ಯ ಮತ್ತು ಕೇಂದ್ರ ಸಚಿವ, ಹಿಂದುಳಿದ ಸಮುದಾಯಗಳ ನಾಯಕ ಆರ್‌.ಎಲ್‌ ಜಾಲಪ್ಪನವರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಕೋರಲಾಯಿತು. ಸಭೆಯಲ್ಲಿ ಉಪಸ್ಥಿತರಿದ್ದ ಹಾನಗಲ್‌ ಶಾಸಕ ಶ್ರೀನಿವಾಸ್‌ ಮಾನೆ ಮಾತನಾಡಿ, ಸಂಘಟನೆಯಿಂದ ವಂಚಿತರಾಗಿ ಛಿದ್ರವಾಗಿರುವ ಅತಿ ಹಿಂದುಳಿದ ವರ್ಗಗಳಿಗೆ ದೊಡ್ಡ ಭರವಸೆಯಾಗಿದೆ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ವೇದಿಕೆ. ಮುಂದಿನ ದಿನಗಳಲ್ಲಿ ಅತಿ ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಯ ನಿರೀಕ್ಷೆಯನ್ನು ಖಂಡಿತಾ ಇಟ್ಟುಕೊಳ್ಳಬಹುದು. ಓರ್ವ ಶಾಸನ ಸಭೆಯ ಪ್ರತಿನಿಧಿಯಾಗಿ ಸಂಘಟನೆಗೆ ಸಾಧ್ಯವಿರುವ ಎಲ್ಲಾ ಅಗತ್ಯ ಕೆಲಸಗಳಿಗೂ ಬದ್ಧನಿದ್ದೇನೆ ಎಂದರು.

     

    ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಮೊಮ್ಮಗ ಸೂರಜ್, ನಿವೃತ್ತ ಐಎಎಸ್‌ ಅಧಿಕಾರಿ ಶ್ರೀನಿವಾಸ ಆಚಾರಿ, ನಿವೃತ್ತ ಐಎಎಸ್‌ ಅಧಿಕಾರಿ ಎಸ್‌ ಪುಟ್ಟಸ್ವಾಮಿ, ಕೆಎಎಸ್‌ ಅಧಿಕಾರಿ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಕೆಎನ್‌ ಲಿಂಗಪ್ಪ, ವಿಧಾನ ಪರಿಷತ್‌ ಮಾಜಿ ಶಾಸಕ ತಿಪ್ಪಣ್ಣ, ವೇದಿಕೆಯ ಖಜಾಂಚಿ ಎಲ್‌.ಎ ಮಂಜುನಾಥ್‌, ಪ್ರಧಾನ ಕಾರ್ಯದರ್ಶಿ ಎಂ ನಾಗರಾಜ್‌, ಕಲಗೋಡು ರತ್ನಾಕರ್, ಶೋಭಾ, ಯಲ್ಲಪ್ಪ, ಕೆಎಸ್‌ ದುಶ್ಯಂತ, ಚಂದ್ರಶೇಖರ್‌ ಪಿ, ಮಂಜುನಾಥ್‌ ಎಸ್‌, ಪಲ್ಗುಣ, ಚಿದಾನಂದ ಬಡಿಗೇರಾ, ಕೆಎನ್‌ ಅಶೋಕ, ಶಿವಾನಂದ ಲಕ್ಷ್ಮಣ ಪಾಚಂಗಿ, ಗೋಪಿನಾಥ ರಾಜು, ಎಲ್‌ ಶಿವಶಂಕರ್‌, ಶಿವು ಯಾದವ್‌, ಗೋ ತಿಪ್ಪೇಶ್‌, ಗಣೇಶ್‌ ರಾವ್‌, ವರದರಾಜು, ಸತ್ಯನಾರಾಯಣ ರಾಜು, ದಿನೇಶ್‌ ಅರಸು, ಪದ್ಮನಾಭ್‌, ಚಂದ್ರಾನಾಯಕ್‌, ದೇವರಾಜು, ಶಂಕ್ರಪ್ಪ, ಚೆನ್ನಕೇಶವ ಮುಂತಾದವರು ಈ ಸಭೆಯಲ್ಲಿಉಪಸ್ಥಿತರಿದ್ದರು.

    Related

    Share. Facebook Twitter LinkedIn Email WhatsApp

    Related Posts

    ದುರುಗುಟ್ಟಿ ನೋಡಿದ್ದಕ್ಕೇ ತಮ್ಮನ ಕೊಲೆ: ಪೊಲೀಸರ ಮುಂದೆ ಅಣ್ಣ ಹೇಳಿದ್ದೇನು?

    ಹುರೂಪಿಯ ಕೃತಿ ಬಿಡುಗಡೆಯಲ್ಲಿ ಅಮ್ಮನ ನೆನಪು

    ಅತ್ಯಾಚಾರ ಎಸಗಿ ಕೊಲೆ: ಸುಟ್ಟ ಸ್ಥಿತಿಯಲ್ಲಿ ಮಹಿಳೆ‌ಯ ಶವ ಪತ್ತೆ

    ಶಾಲೆಯಲ್ಲಿ ಒಂದು ಮಗುವಿಗೆ ಅಪಾಯವಾದರೂ ಸುಮ್ಮನಿರುವ ಪ್ರಶ್ನೆ ಇಲ್ಲ: ಹೆಚ್.ಡಿ.ಕುಮಾರಸ್ವಾಮಿ

    ಕೆಎಂಎಫ್ ಗೆ ಭೇಟಿ ನೀಡಿದ ಪ್ರಭು ಚೌವ್ಹಾಣ್: ಉತ್ಪನ್ನ ಘಟಕದಲ್ಲಿ ತಯಾರಿಸುವ ತಿಂಡಿ ತಿನಿಸು ಪರಿಶೀಲಿಸಿದ ಸಚಿವ

    ಖೋಟಾನೋಟು ಎಷ್ಟಿದೆ ಎಂದು ಪ್ರಧಾನಿ ಮೋದಿ ಬಾಯಿಬಿಡುತ್ತಿಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

    ಪಬ್ ಹೌಸ್ ಮೇಲೆ ದಾಳಿ: 19 ಯುವತಿಯರು CCB ಬಲೆಗೆ

    ರಾಜ್ಯದ ಜನತೆಗೆ ಮತ್ತೊಂದು ಶಾಕ್: ಕೊರೊನಾ ಚಿಕಿತ್ಸಾ ದರ ಏರಿಕೆಗೆ ಆರೋಗ್ಯ ಇಲಾಖೆ ನಿರ್ಧಾರ

    BREAKING.. ದುಷ್ಕರ್ಮಿಗಳಿಂದ ಘೋರ ಕೃತ್ಯ: ಬೆಂಗಳೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

    ವಾಹನ ಸವಾರರಿಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ

    ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ವಿದ್ಯುತ್ ಸಂಪರ್ಕ ಪಡೆಯುವುದಕ್ಕೆ ಓಸಿ ಕಡ್ಡಾಯ ಎಂಬ ನಿಯಮ ರದ್ದು

    ಸಾರಿಗೆ ವ್ಯವಸ್ಥೆಗೆ ಬಿಜೆಪಿ ಸರ್ಕಾರ ನಿಧಾನವಾಗಿ ವಿಷ ಕೊಟ್ಟು ಕೊಲ್ಲುತ್ತಿದೆ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

    ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

    ಪುತ್ರನಿಗೆ ಕಳ್ಳತನದ ತರಬೇತಿ ನೀಡಿದ ತಂದೆ: ಪೊಲೀಸರಿಗೆ ಅನುಮಾನ ಬಾರದಿರಲಿ ಎಂದು ಮಾಡಿದ್ದೇನು ಗೊತ್ತಾ..?

    ಕೆಂಪೇಗೌಡರ ಜಯಂತಿ ಅಂಗವಾಗಿ ”ಹಾಡು ಕುಣಿದಾಡು ಕನ್ನಡ ಮಾತನಾಡು” ಕಾರ್ಯಕ್ರಮ

    ವೈದ್ಯರ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಉಚಿತ ಹಲ್ಲಿನ ತಪಾಸಣೆ

    ಯುವಕರನ್ನ ನಿರುದ್ಯೋಗಿಗಳನ್ನ ಮಾಡುವ ಅಗ್ನಿಪಥ್ ಯೋಜನೆ ಕೈ ಬಿಡುವಂತೆ ಪ್ರತಿಭಟನೆ

    ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ: ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಪ ವಿಭಾಗಾಧಿಕಾರಿ ಶಿವಣ್ಣ

    ಮಾಜಿ ತಾ. ಪಂ. ಅಧ್ಯಕ್ಷೆ ಮುನಿರತ್ನಮ್ಮ ಕುಟುಂಬಕ್ಕೆ ಕೊಲೆ ಬೆದರಿಕೆ..!

    ಎಟಿಎಂನಲ್ಲಿ ಸಹಾಯ ಮಾಡಿದ್ದ ವ್ಯಕ್ತಿಯಿಂದ ವೃದ್ಧನಿಗೆ 8.5 ಲಕ್ಷ ವಂಚನೆ: ಆರೋಪಿ ಅಂದರ್

    ಎಟಿಎಂಗಳಲ್ಲಿ ಸಹಾಯ ಮಾಡುವ ನೆಪದಲ್ಲಿ ವಂಚನೆ: 8.50 ಲಕ್ಷ ಎಗರಿಸಿ ATM ಕಾರ್ಡ್ ನೊಂದಿಗೆ ಎಸ್ಕೇಪ್

    ಚಾಕು ತೋರಿಸಿ ಸುಲಿಗೆ ಮಾಡಿದ್ದ ಖದೀಮನಿಂದಲೇ ದೂರು ದಾಖಲು..!

    ರಸ್ತೆ ಗುಂಡಿ ಮುಚ್ಚುವಲ್ಲಿ BBMP ವಿಫಲ: ಬಿಬಿಎಂಪಿ ತರಾಟೆಗೆ ತೆಗೆದುಕೊಂಡ ಹೈಕೋರ್ಟ್

    ಕನ್ನಡ ಭಾಷೆ, ಸಾಹಿತ್ಯಕ್ಕೆ ಕನ್ನಡ ಪತ್ರಿಕೋದ್ಯಮದ ಕೊಡುಗೆ ಅಪಾರ: ಸಿಎಂ ಬಸವರಾಜ ಬೊಮ್ಮಾಯಿ

    ದತ್ತ ಪೀಠದ ಕುರಿತ ಸಂಪುಟ ತೀರ್ಮಾನ ಸುದೀರ್ಘ ಹೋರಾಟಕ್ಕೆ ಸಿಕ್ಕ ಗೆಲುವು: ಸಿಟಿ ರವಿ

    ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 871 ಜನರಿಗೆ ಕೊರೋನ ಸೋಂಕು..!

    ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ 3 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಗಳ ಕಳ್ಳತನ: ಕೆಂಗೇರಿ ಪೊಲೀಸರಿಂದ ಆರೋಪಿಗಳ ಬಂಧನ

    PSI ಮರು ಪರೀಕ್ಷೆ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

    ಬಂಧಿತರಾಗುವ ಸಾಮಾನ್ಯ ಕೈದಿಗಳಿಗೆ ಕೈಕೋಳ ಹಾಕ ಬಾರದು: ಹೈಕೋರ್ಟ್

    ಬಿಬಿಎಂಪಿ ವಾರ್ಡ್ ವಿಂಗಡಣೆಗೆ ಸಾರ್ವಜನಿಕರಿಂದ ಆಕ್ಷೇಪಣೆ: 2 ಸಾವಿರಕ್ಕೂ ಅಧಿಕ ಅರ್ಜಿ ಸಲ್ಲಿಕೆ

    ಸಿದ್ದರಾಮಯ್ಯ, ಹೆಚ್ ಡಿಕೆ ದುರಹಂಕಾರಕ್ಕೆ ಕಾಂಗ್ರೆಸ್ ಹಾಳಾಯ್ತು: ಮಾಜಿ ಸಚಿವ ಹೆಚ್.ವಿಶ್ವನಾಥ್

    ಬನಶಂಕರಿ ದೇವಿಗೆ ಅರ್ಪಿಸೋ ಹೂವಿನ ಹಾರ, ನಿಂಬೆ ಹಾರದಲ್ಲೂ ಅವ್ಯವಹಾರ: ಮುಜರಾಯಿ ಆಯುಕ್ತರಿಗೆ ದೂರು

    ಹಾಡಹಗಲೇ ಮಹಿಳೆ ಮಾಂಗಲ್ಯ ಸರಕ್ಕೆ ಕೈ ಹಾಕಿ ಸಿಕ್ಕಿಬಿದ್ದ ಕಳ್ಳ: ಸಾರ್ವಜನಿಕರಿಂದ ಸಿಕ್ತು ಗೂಸ

    ರಾರಾಜಿಸುತ್ತಿರುವ ಜನಪ್ರತಿನಿಧಿಗಳ ಪ್ಲೆಕ್ಸ್: ತೋರಣಕ್ಕೆ ಬಳಸುವ ದಾರ ಅಪಾಯಕಾರಿ – ಸ್ಥಳೀಯರು ಕಿಡಿ

    ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ರಾಷ್ಟ್ರಮಟ್ಟದಲ್ಲಿ ಸಿಇಟಿ ನಡೆಸಲು ಸಿದ್ಧ: ಸಚಿವ ಅಶ್ವಥ್ ನಾರಾಯಣ್

    ಹೊರಗುತ್ತಿಗೆ ಮಹಿಳಾ ನೌಕರರಿಗೆ ಮಾತೃತ್ವ ರಜೆ: ರಾಜ್ಯ ಸರ್ಕಾರದ ಅಧಿಕೃತ ಆದೇಶ

    ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 123 ಸ್ಥಾನ ಗೆಲ್ಲುವ ವಿಶ್ವಾಸವಿದೆ: ಎಚ್.ಡಿ.ಕುಮಾರಸ್ವಾಮಿ

    PSI ನೇಮಕಾತಿ ಅಕ್ರಮ ಪ್ರಕರಣ: ಸಮರ್ಪಕ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶ

    ರಕ್ತಚಂದನ ಮರಗಳ ಅಕ್ರಮ ಸಾಗಾಟ: ಶೇಷಾದ್ರಿಪುರ ಪೊಲೀಸರಿಂದ ಆರೋಪಿಗಳ ಬಂಧನ

    https://www.youtube.com/watch?v=8HqvcflixgA&t=53s
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.