ಕಾಡುಪ್ರಾಣಿಗಳು ನಡೆಸುವ ದಾಳಿಯಿಂದ ರಕ್ಷಿಸಿಕೊಳ್ಳಲು ನಿರ್ಮಿಸಲಾದ ಆನೆಕಂದಕ,ಸೋಲಾರ್ ತಂತಿ,ರೈಲ್ವೆ ಹಳಿ ಬೇಲಿ ಯಿಂದಾಗಿ ಆದಿವಾಸಿಯ ಅಂತ್ಯ ಸಂಸ್ಕಾರಕ್ಕೆ ಇನ್ನಿಲ್ಲದ ಕಸರತ್ತು ನಡೆಸುವಂತಾಗಿದೆ.ಹೂಳುವ ಜಾಗಕ್ಕೆ ಮೃತದೇಹ ಸಾಗಿಸಲು ಆದಿವಾಸಿಗಳು ಹರಸಾಹಸವನ್ನೇ ಮಾಡಿದ್ದಾರೆ.ಮೃತದೇಹವನ್ನ ಹೊತ್ತು ಭಾರಿ ಆಳವಿರುವ ಕಂದಕದಲ್ಲಿ ಇಳಿದು ಸೋಲಾರ್ ತಂತಿ ಅಳವಡಿಸಿರುವ ರೈಲ್ವೆ ಹಳಿ ಬೇಲಿಯನ್ನ ದಾಟಿರುವ ದೃಶ್ಯ ಆದಿವಾಸಿಗಳು ಅನುಭವಿಸುತ್ತಿರುವ ಪರಪಾಟಲುಗಳಿಗೆ ಸಾಕ್ಷಿಯಾಗಿದೆ.
ಹೆಚ್.ಡಿ.ಕೋಟೆ ತಾಲೂಕು ಹಿರೆಹಳ್ಳಿ ಆದಿವಾಸಿಗಳ ದುಃಸ್ಥಿತಿ ಇದು.ಆದಿವಾಸಿಗಳ ಪೈಕಿ ಯಾರಾದ್ರೂ ಮೃತಪಟ್ಟಲ್ಲಿ ಅಂತ್ಯ ಸಂಸ್ಕಾರ ನೆರವೇರಿಸುವುದೇ ಒಂದು ಸವಾಲು.ಆದಿವಾಸಿಗಳ ಸಂಪ್ರದಾಯದಂತೆ ಅರಣ್ಯ ಪ್ರದೇಶದಲ್ಲೇ ಶವಸಂಸ್ಕಾರ ಮಾಡುತ್ತಾರೆ.ಆನೆಕಂದಕ,ಸೋಲಾರ್ ಹಾಗೂ ರೈಲ್ವೆ ಹಳಿ ಬೇಲಿಯಿಂದಾಗ ಮೃತದೇಹವನ್ನ ಅರಣ್ಯ ಪ್ರದೇಶಕ್ಕೆ ಕೊಂಡೊಯ್ಯಲು ಸಾಧ್ಯವಾಗದೆ ಹರಸಾಹಸ ಪಡುತ್ತಿದ್ದಾರೆ.
ಒಂದು ಚಮಚ ಜೇನುತುಪ್ಪ ಸೇವಿಸಿದರೆ ಸಿಗುತ್ತೆ ಹಲವು ಆರೋಗ್ಯಕರ ಲಾಭಗಳು..!
ರೈಲ್ವೆ ಬೇಲಿಯ ನಡುವೆ ಆದಿವಾಸಿಗಳ ಅನುಕೂಲಕ್ಕಾಗಿ ಒಂದು ಗೇಟ್ ನಿರ್ಮಿಸಿ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯ ಮಾಡಿದ್ದಾರೆ.ಹಾಗೊಂದು ವೇಳೆ ಗೇಟ್ ನಿರ್ಮಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಗುಡಿಸಲುಗಳ ಮಧ್ಯಯೇ ಅಂತ್ಯ ಸಂಸ್ಕಾರ ಮಾಡುವುದಾಗಿ ಭಾನುವಾರ ಮಧ್ಯಾಹ್ನ 12 ಗಂಟೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.ರಾಜ್ಯದ ಮುಖ್ಯಮಂತ್ರಿಗಳಾಗಲಿ,ಸ್ಥಳೀಯ ಶಾಸಕ ಅನಿಲ್ ಚಿಕ್ಕಮಾದು ಆಗಲಿ ಇತ್ತ ಗಮನ ಹರಿಸಿ ಆದಿವಾಸಿಗಳ ಸಮಸ್ಯೆಗೆ ಪರಿಹಾರ ದೊರಕಿಸಬೇಕಿದೆ…