ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರಿಂದು ಸದಾಶಿವನಗರದ ನಿವಾಸದಲ್ಲಿ ಗೃಹ ಸಚಿವ ಪರಮೇಶ್ವರ್ ಅವರನ್ನ ಭೇಟಿ ಮಾಡಿದ್ದಾರೆ. ಹೆಚ್ಡಿಕೆ ಹಾಗೂ ಯಡಿಯೂರಪ್ಪ ವಿರುದ್ಧ ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ, ಮುಡಾ ಪ್ರಕರಣ ಸೇರಿ ಕೆಲವು ಮಹತ್ವದ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚಿಸಿದ್ದಾರೆ.
ನಾವು ಅನವಶ್ಯಕವಾಗಿ ಡಿನ್ನರ್ ಮೀಟಿಂಗ್ (Dinner Meeting), ರಾಜಕೀಯ ಮೀಟಿಂಗ್ಸ್ ಮಾಡಿಲ್ಲ, ಮಾಡುವುದೂ ಇಲ್ಲ. ಮುಂದೆಯೂ ಅನವಶ್ಯಕ ಭೇಟಿಗಳನ್ನು ಮಾಡಲ್ಲ. ಇದು ನನ್ನ ಸ್ಪಷ್ಟ ಹೇಳಿಕೆ. ಏನೂ ಇಲ್ಲದೇ ನಮ್ಮನ್ನು ಆಪಾದಿತರ ಸ್ಥಾನದಲ್ಲಿ ನಿಲ್ಲಿಸಿದರೆ ಬೇಜಾರಾಗಲ್ವಾ? ನಾವೆಲ್ಲ ಜವಾಬ್ದಾರಿ ಇರೋರು, ಹುಡುಗಾಟಿಕೆ ಮಾಡೋರಲ್ಲ, ನಾವು ಪಕ್ಷದಲ್ಲಿ ಹಿರಿಯರು, ನಮಗೂ ಜವಾಬ್ದಾರಿ ಇದೆ ಎಂದು ಗರಂ ಆಗಿದ್ದಾರೆ.
ಇದೇ ವೇಳೆ ಬಿಜೆಪಿ ಕಾಲದ ಹಗರಣಗಳ ತನಿಖೆ ವಿಚಾರಕ್ಕೆ ಪ್ರತಿಕ್ರಿಯಿಸಿ, ತನಿಖೆ ಮುಗಿದಾಗ ತನಿಖಾ ವರದಿ ಬಿಡುಗಡೆ ಮಾಡ್ತೇವೆ. ಕೆಲವು ಅಂತಿಮ ಹಂತದ ತನಿಖೆಯಲ್ಲಿವೆ, ಅವು ಪೂರ್ತಿ ಆಗಲಿ. ಹಣಕಾಸು ಅಕ್ರಮಗಳಿವೆ, ಇನ್ನೂ ಬೇರೆ ಬೇರೆ ಇವೆ ಎಂದಿದ್ದಾರೆ.