ಕಾರವಾರ: ಎಲ್ಲಿಯವರೆಗೆ ಇಸ್ಲಾಂ ಇರುತ್ತದೆಯೋ, ಅಲ್ಲಿಯವರೆಗೆ ಜಗತ್ತಿಗೆ ನೆಮ್ಮದಿಯಿಲ್ಲ ಎಂದು ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬನವಾಸಿಯಲ್ಲಿ ನಡೆದ ಬಿಜೆಪಿ (ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಕಾಲಘಟ್ಟದಲ್ಲಿ ಹಿಂದೂ ಧರ್ಮ, ದೇಶ ಉಳಿಯಲು ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಆಗಬೇಕಾಗಿದೆ. ಬಿಜೆಪಿ ಮತ್ತು ಸಂಘ ಪರಿವಾರ ಇದ್ದಲ್ಲಿ ಜಗತ್ತಿಗೆ ನೆಮ್ಮದಿ ಸಿಗಲಿದೆ.
ನಾವು ಇಲ್ಲದಿದ್ದರೆ ಜಗತ್ತಿನಲ್ಲಿ ನೆಮ್ಮದಿ ಇಲ್ಲ. ಹಿಂದುತ್ವವು ನಮ್ಮ ದೇಶದ ಉಸಿರಾಗಿದೆ. ಕಾಂಗ್ರೆಸ್ನವರು ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಯ ಉತ್ಸಾಹ ನೋಡಿ ಶಸ್ತ್ರ ತ್ಯಜಿಸಿದ್ದಾರೆ. ವೈಚಾರಿಕವಾಗಿ ನಾವು ಚುನಾವಣೆ ಗೆದ್ದು ತೋರಿಸಬೇಕಿದೆ ಎಂದು ಕರೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನಮ್ಮವರಿಗೆ ಏಕವಚನದಲ್ಲಿ ಮಾತನಾಡಿದ್ದು ನೋಡಿ ಸುಮ್ಮನಿರಲು ಸಾಧ್ಯವಿಲ್ಲ.
ಖಾಲಿ ಹೊಟ್ಟೆಯಲ್ಲಿ ಬೆಲ್ಲ ಬೆರೆಸಿದ ಜೀರಿಗೆ ನೀರು ಕುಡಿಯುವುದರಿಂದ ಆಗುವ ಪ್ರಯೋಜಗಳೇನು ಗೊತ್ತಾ..?
ಅವರಿಗೆ ಮಗನೇ ಎನ್ನದೇ ಬೇರೆನು ಹೇಳಲು ಸಾಧ್ಯ? ಅಪ್ಪ ಅಂತಲೋ, ಅಜ್ಜ ಅಂತಲೋ, ಮಾಮಾ ಅಂತಲೋ ಕರೆಯಲು ಸಾಧ್ಯವೇ? ಯುದ್ಧ ಕಾಲದಲ್ಲಿ ಯಾವ ಭಾಷೆಯಲ್ಲಿ ಮಾತನಾಡಬೇಕೋ ಅದನ್ನೇ ಬಳಸಬೇಕು. ಅಲ್ಲಿ ಶಾಸ್ತ್ರೀಯ ಸಂಗೀತ ಬಳಸಲು ಸಾಧ್ಯವಿಲ್ಲ. ಮಸೀದಿಯ ಬಗ್ಗೆ ಹೇಳಿಕೆ ನೀಡಿದ್ದಕ್ಕೆ ನನ್ನ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಸಿಎಂಗೆ ಥ್ಯಾಂಕ್ಸ್ ಹೇಳಿದ್ದೇನೆ. ತುಂಬಾ ವರ್ಷ ಆಗಿತ್ತು, ಕೇಸ್ ಇರದೆ ಒಂದು ರೀತಿಯ ಮುಜುಗುರ ಉಂಟಾಗಿತ್ತು. ಏನೋ ಕಳೆದುಕೊಂಡಂತೆ ಅನಿಸುತ್ತಿತ್ತು. ಈಗ ಪುನಃ ಮತ್ತೆ ಬಂದ ಅನುಭವ ಆಗುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.