ಸ್ಯಾಂಡಲ್ವುಡ್ ನಿರ್ಮಾಪಕ, ಉದ್ಯಮಿ ಸೌಂದರ್ಯ ಜಗದೀಶ್ ಏ.14 ರಂದು ತಮ್ಮ ನಿವಾಸದಲ್ಲಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಈ ಬೆನ್ನಲ್ಲೇ ಸ್ಯಾಂಡಲ್ವುಡ್ ಗಣ್ಯರು ಜಗದೀಶ್ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇದೀಗ ಕೈನೋವಿನ ನಡುವೆಯೂ ನಟ ದರ್ಶನ್ ಆಪ್ತ ಸ್ನೇಹಿತ ಸೌಂದರ್ಯ ಜಗದೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ.
ಸೌಂದರ್ಯ ಜಗದೀಶ್ ಆತ್ಮಹತ್ಯೆ ಕುಟುಂಬಸ್ಥರಿಗೆ, ಆಪ್ತರಿಗೆ ಶಾಕ್ ಕೊಟ್ಟಿದೆ. ಜಗದೀಶ್ಗೆ ಅಂತಿಮ ನಮನ ಸಲ್ಲಿಸಲು ಗಣ್ಯರು ಮನೆಗೆ ಭೇಟಿ ನೀಡುತ್ತಿದ್ದಾರೆ. ಹೀಗಿರುವಾಗ ಹಲವು ವರ್ಷಗಳ ಸ್ನೇಹಿತರಾದ ಜಗದೀಶ್ಗೆ ಅಂತಿಮ ದರ್ಶನ ಪಡೆಯಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಮಿಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
‘ಡೆವಿಲ್’ ಶೂಟಿಂಗ್ನಲ್ಲಿ ಕೈಗೆ ಏಟು ಮಾಡಿಕೊಂಡಿದ್ದರ ಹಿನ್ನಲೆ ಇತ್ತೀಚೆಗೆ ದರ್ಶನ್ ಎಡಗೈಗೆ ಸರ್ಜರಿ ಆಗಿತ್ತು. ಒಂದು ತಿಂಗಳುಗಳ ಕಾಲ ರೆಸ್ಟ್ ಅಗತ್ಯ ಎಂದು ವೈದ್ಯರು ಹೇಳಿದ್ದರು. ಕೈನೋವಿನ ನಡುವೆಯೂ ಜಗದೀಶ್ ಅಂತಿಮ ದರ್ಶನಕ್ಕೆ ದರ್ಶನ್ ಆಗಮಿಸಿ ಕುಟುಂಬದವರಿಗೆ ಸಂತೈಸಿದ್ದಾರೆ. ಈ ವೇಳೆ, ದರ್ಶನ್ ಜೊತೆ ನಟ ಧನ್ವೀರ್ ಗೌಡ ಮತ್ತು ಯಶಸ್ ಸೂರ್ಯ ಆಗಮನಿಸಿದ್ದರು.
ನಿರ್ಮಾಪಕ ಸೌಂದರ್ಯ ಜಗದೀಶ್ಗೆ ಅಂತಿಮ ದರ್ಶನ ಪಡೆಯಲು ಉಪೇಂದ್ರ ದಂಪತಿ, ನಟಿ ಅಮೂಲ್ಯ, ಶ್ರೀನಗರ ಕಿಟ್ಟಿ, ವಿನೋದ್ ಪ್ರಭಾಕರ್, ಲವ್ಲಿ ಸ್ಟಾರ್ ಪ್ರೇಮ್, ಗುರುಕಿರಣ್ ದಂಪತಿ, ನಟ ಗುರುನಂದನ್ ಸೇರಿದಂತೆ ಅನೇಕರು ಆಗಮಿಸಿದ್ದರು.
![](https://ainlivenews.com/wp-content/uploads/2024/01/Ad-Banner-copy-scaled.jpg)