ಬೆಂಗಳೂರು:- ಸದನ ನಡೆಸಲು ಸ್ಪೀಕರ್ ವಿಫಲರಾಗಿದ್ದಾರೆ ಎಂದು ಆರ್ ಅಶೋಕ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಲೂಟಿ ಆದ ಹಣ ಎಲ್ಲೆಲ್ಲಿ ಹೋಗಿದೆ? ಯಾವಾಗ ವಾಪಸ್ ತರುತ್ತೀರಿ ಎಂದು ನಾವು ನಿಲುವಳಿ ಸೂಚನೆ ಮೂಲಕ ಪ್ರಶ್ನಿಸಿದ್ದೇವೆ. ಅಲ್ಲದೇ ಎಫ್ಐಆರ್ನಲ್ಲಿ ನಾಗೇಂದ್ರ, ನಿಗಮದ ಅಧ್ಯಕ್ಷ, ಶಾಸಕ ದದ್ದಲ್ ಹೆಸರಿಲ್ಲ. ಒತ್ತಡ ಹಾಕಿ ಅವರ ಹೆಸರನ್ನು ಕೈಬಿಟ್ಟಿದ್ದಾರೆ. ಮುಖ್ಯಮಂತ್ರಿ ವೀರಾವೇಶದ ಮಾತನಾಡಿ ತಮ್ಮ ಸರ್ಕಾರ ಭಾಗಿಯಾಗಿಲ್ಲ ಎಂದಿದ್ದಾರೆ. ಹಾಗಿದ್ದರೆ ಸಚಿವರು ರಾಜೀನಾಮೆ ಕೊಟ್ಟಿದ್ದು ಯಾಕೆ? ಬುದ್ಧಿ ಇಲ್ಲದೇ ರಾಜೀನಾಮೆ ಕೊಟ್ಟರೇ ಎಂದು ಅವರು ಪ್ರಶ್ನಿಸಿದ್ದಾರೆ
ಕರ್ನಾಟಕದಲ್ಲಿ ಮಳೆ ಅಬ್ಬರ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಮುಂದುವರಿಕೆ!
89 ಕೋಟಿ ರೂ. ಲೂಟಿ ಆಗಿದೆ ಎಂದು ನೀವೇ ಒಪ್ಪಿಕೊಂಡಿದ್ದೀರಿ. ಆತ್ಮಹತ್ಯೆ ಹಾಗೂ ಲೂಟಿಯ ತನಿಖೆ ಮಾಡುವುದನ್ನು ಬಿಟ್ಟು ನಿಮ್ಮ ಸರ್ಕಾರದಲ್ಲಿ ಹೀಗಾಗಿತ್ತು, ಹಾಗಾಗಿತ್ತು ಎಂದು ಹೇಳಿದ್ದು ಸರಿಯೇ? 40% ಸರ್ಕಾರ ಎಂದು ನಮ್ಮ ವಿರುದ್ಧ ಪೋಸ್ಟರ್ ಅಂಟಿಸಿದ್ದೀರಲ್ಲವೇ? 14 ತಿಂಗಳಾದರೂ 40% ಸರ್ಕಾರ ಎಂಬ ವಿಷಯದಲ್ಲಿ ಫಲಿತಾಂಶ ಬಂದಿದೆಯೇ? ಅದೆಲ್ಲ ಬೋಗಸ್ ಎಂದು ಅವರು ಹೇಳಿದ್ದಾರೆ.