Facebook Twitter Instagram YouTube
    ಕನ್ನಡ     English     తెలుగు
    Sunday, January 29
    Facebook Twitter Instagram YouTube
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ     English     తెలుగు
    Facebook Twitter Instagram YouTube
    Home » ಮಳೆ ಬಾಧಿತ ಫೈನಲ್ ನಲ್ಲಿ ಶ್ರೀಲಂಕಾ ವಿರುದ್ಧ ಗೆಲುವು: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ 8ನೇ ಬಾರಿಗೆ ಚಾಂಪಿಯನ್

    ಮಳೆ ಬಾಧಿತ ಫೈನಲ್ ನಲ್ಲಿ ಶ್ರೀಲಂಕಾ ವಿರುದ್ಧ ಗೆಲುವು: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ 8ನೇ ಬಾರಿಗೆ ಚಾಂಪಿಯನ್

    ain userBy ain userJanuary 1, 2022
    Share
    Facebook Twitter LinkedIn Pinterest Email

    ದುಬೈ : ಪಂದ್ಯದ ಎಲ್ಲಾ ವಿಭಾಗಗಳಲ್ಲೂ ಆಕರ್ಷಕ ನಿರ್ವಹಣೆ ತೋರಿದ ಭಾರತ ತಂಡ ಅಂಡರ್ 19 ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ 8ನೇ ಬಾರಿಗೆ ಚಾಂಪಿಯನ್ ಆಗಿದೆ. ಶುಕ್ರವಾರ ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಮಳೆಬಾಧಿತ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಡಕ್ ವರ್ತ್ ಲೂಯಿಸ್ ನಿಯಮದನ್ವಯ 9 ವಿಕೆಟ್ ಗಳಿಂದ ಸೋಲಿಸಿದ ಯಶ್ ಧುಲ್ ನೇತೃತ್ವದ ಭಾರತ ತಂಡ 2021ರ ಅಂಡರ್ 19 ಏಷ್ಯಾಕಪ್ ನಲ್ಲಿ ಚಾಂಪಿಯನ್ ಎನಿಸಿಕೊಂಡಿತು. ಆ ಮೂಲಕ ಜನವರಿಯಲ್ಲಿ ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಅಂಡರ್ 19 ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡ ಭರ್ಜರಿಯಾಗಿ ಅಭ್ಯಾಸ ನಡೆಸಿದೆ.

    ಪಂದ್ಯಕ್ಕೆ ಹಲವು ಬಾರಿ ಮಳೆ ಅಡ್ಡಿಪಡಿಸಿದ್ದರಿಂದ ತಲಾ 38 ಓವರ್ ಗಳಿಗೆ ಪಂದ್ಯವನ್ನು ನಿಗದಿ ಮಾಡಲಾಗಿತ್ತು. ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದ ದ್ವೀಪರಾಷ್ಟ್ರ ಶ್ರೀಲಂಕಾ ತಂಡ 38 ಓವರ್ ಗಳಲ್ಲಿ 9 ವಿಕೆಟ್ ಗೆ 106 ರನ್ ಗಳಿಸಿದ್ದ ವೇಳೆ ಅವರ ಇನ್ನಿಂಗ್ಸ್ ಅನ್ನು ಕೊನೆ ಮಾಡಲಾಗಿತ್ತು. ಇದರಿಂದಾಗಿ ಡಿಎಲ್ ನಿಯಮದನ್ವಯ 38 ಓವರ್ ಗಳಲ್ಲಿ 102 ರನ್ ಗಳನ್ನು ಬಾರಿಸುವ ಪರಿಷ್ಕೃತ ಸವಾಲು ಪಡೆದಿದ್ದ ಭಾರತ ತಂಡ 21.3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 104 ರನ್ ಬಾರಿಸಿ ಗೆಲುವು ಕಂಡಿತು.

    Demo

    ತಂಡದ ಗೆಲುವಿನಲ್ಲಿ ಮಿಂಚಿದ  ಅಂಗ್ ಕ್ರಿಷ್ ರಘುವಂಶಿ ಅದ್ಭುತ ಅರ್ಧಶತಕ ಬಾರಿಸುವ ಮೂಲಕ ಸುಲಭ ಗೆಲುವಿಗೆ ಕಾರಣರಾದರು. ಆರಂಭಿಕ ಹರ್ನೂರ್ ಸಿಂಗ್ (5) ವಿಕೆಟ್ ಅನ್ನು 5ನೇ ಓವರ್ ನಲ್ಲಿಯೇ ಕಳೆದುಕೊಂಡಿದ್ದ ಭಾರತ ತಂಡಕ್ಕೆ 2ನೇ ವಿಕೆಟ್ ಗೆ ರಘುವಂಶಿ ಹಾಗೂ ಸೆಮಿಫೈನಲ್ ಪಂದ್ಯದ ಗೆಲುವಿನ ಹೀರೋ ಶೇಖ್ ರಶೀದ್ ಮುರಯದ 96 ರನ್ ಗಳ ಜೊತೆಯಾಟವಾಡಿ ತಂಡವನ್ನು ಚಾಂಪಿಯನ್ ಪಟ್ಟವೇರಿದರು.  67 ಎಸೆತಗಳನ್ನು ಎದುರಿಸಿದ ಅಂಗ್ ಕ್ರಿಷ್ ರಘುವಂಶಿ 7 ಬೌಂಡರಿಯೊಂದಿಗೆ 56 ರನ್ ಬಾರಿಸಿದರೆ, ಶೇಖ್ ರಶೀದ್ 49 ಎಸೆತಗಳಲ್ಲಿ 2 ಬೌಂಡರಿಯೊಂದಿಗೆ 31 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

    Share. Facebook Twitter LinkedIn Email WhatsApp

    Related Posts

    Axar Patel.. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಆಲ್ ರೌಂಡರ್ ಅಕ್ಷರ್ ಪಟೇಲ್..!

    January 29, 2023

    Women’s Premier League.. 5 ತಂಡಗಳ ಹರಾಜಿನ ಮೂಲಕ 4669.99 ಕೋಟಿ ರೂ. ಗಳಿಸಿದ BCCI

    January 28, 2023

    ರಣಜಿ ಟ್ರೋಫಿ ಟೂರ್ನಿಯಲ್ಲಿ ಮತ್ತೊಮ್ಮೆ ಉತ್ತಮ ಆರಂಭ ಪಡೆದ ಕರ್ನಾಟಕ

    January 27, 2023

    Hockey World Cup.. ಇಂದು ಬೆಲ್ಜಿಯಂ-ನೆದರ್ ಲೆಂಡ್ಸ್ ಹೋರಾಟ: ಆಸ್ಟ್ರೇಲಿಯಾಗೆ ಜರ್ಮನಿ ಸವಾಲು

    January 27, 2023

    ಮೇರಿ ನೇತೃತ್ವದ ಸಮಿತಿ ಬಗ್ಗೆ ಕುಸ್ತಿಪಟುಗಳ ಬೇಸರ..!

    January 27, 2023

    Australian Open.. ಆಸ್ಪ್ರೇಲಿಯನ್ ಓಪನ್ ಟೂರ್ನಿಯಲ್ಲಿ ವಿಕ್ಟೋರಿಯಾ ಅಜರೆಂಕಾ ಸೆಮೀಸ್ ಪ್ರವೇಶ

    January 27, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.