ತುಮಕೂರು: ಇಂದು 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅನುತೀರ್ಣ ಹಿನ್ನೆಲೆ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ತೋವಿನಕೆರೆ ಸಮೀಪದ ಹೆರಜೇನಹಳ್ಳಿಯಲ್ಲಿ ನಡೆದಿದೆ.
ರಂಜಿತ, ಪ್ರಿಯದರ್ಶಿನಿ ಆತ್ಮಹತ್ಯೆಗೆ ಯತ್ನಸಿದ ವಿದ್ಯಾರ್ಥಿಗಳಾಗಿದ್ದು, ಲಕ್ಷ್ಮಣರೇಖೆ ಹಾಗೂ ಮತ್ತೋರ್ವ ವಿದ್ಯಾರ್ಥಿನಿ ಪಿನಾಯಲ್ ಕುಡಿದು ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ಕೊರಟಗೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಿಯದರ್ಶಿನಿ, ರಂಜಿತಾಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಯತ್ನದಿಂದ ಪೋಷಕರು ಕಂಗಾಲು ಆಗಿದ್ದಾರೆ.