ಬೆಂಗಳೂರು : ಬರ ಪರಿಹಾರ ನೀಡದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ನ್ಯಾಯಾಲಯದ ಮೋರೆ ಹೋಗಿರುವ ಬಗ್ಗೆ ಪ್ರತಿಕ್ರಿಯಿಸಲು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿರಾಕರಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದರ ಬಗ್ಗೆ ನಾನೇನು ಉತ್ತರ ಕೊಡಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.
BIGG News: ಮಂಡ್ಯದಿಂದ HDK ಕಣಕ್ಕೆ ಇಳಿಯೋದು ಫಿಕ್ಸ್: ಅಧಿಕೃತ ಘೋಷಣೆಯೊಂದೆ ಬಾಕಿ!
ಇಂದು ದಾವಣಗೆರೆ, ನಾಳೆ ಬೆಳಗಾವಿಗೆ ತೆರಳುತ್ತೇನೆ. ಎಲ್ಲಾ ಕಾರ್ಯಕರ್ತರ ಜೊತೆ ಮಾತನಾಡಿ, ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ. ರಾಜ್ಯದಲ್ಲಿ ಯಾವುದೇ ಗೊಂದಲ ಇಲ್ಲ. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ 28ಕ್ಕೆ 28 ಕ್ಷೇತ್ರ ಗೆಲ್ಲುವ ಪ್ರಾಮಾಣಿಕ ಪ್ರಯತ್ನ ಮಾಡ್ತಿದ್ದೇವೆ. ಅದರಲ್ಲಿ ಯಶಸ್ವಿಯಾಗೋ ವಿಶ್ವಾಸ ಇದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷಗಳ ದಕ್ಷ ಆಡಳಿತದ ಸಾಧನೆಯೇ ನಮಗೆ ಸಿಕ್ಕಿರುವ ಬ್ರಹ್ಮಾಸ್ತ್ರ. ಮೋದಿ ಸರ್ಕಾರದ ಯೋಜನೆಗಳು ಯಾವುದೇ ಜಾತಿ ಕೇಂದ್ರೀಕೃತವಾಗಿಲ್ಲ. ಎಲ್ಲ ಸಾಧನೆಗಳನ್ನು ನಮ್ಮ ಕಾರ್ಯಕರ್ತರು ಮನೆ ಮನೆಗೆ ತಲುಪಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.