ಚಿಕ್ಕಬಳ್ಳಾಪುರ: ರಾಜ್ಯದ ತನಿಖಾ ಸಂಸ್ಥೆಗಳು ಸರ್ಕಾರದ ತಾಳಕ್ಕೆ ಕುಣಿಯುತ್ತಿವೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಕಪ್ಪು ಚುಕ್ಕೆ ಬಿದ್ದಿದೆ. ಈ ಬಗ್ಗೆ ಸಿಬಿಐ ತನಿಖೆಯಾಗಿ ಸತ್ಯಾಸತ್ಯತೆ ಹೊರಬರಬೇಕು ಎಂದು ನಟ ಚೇತನ್ ಅಹಿಂಸಾ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ” ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ ಸೇರಿದಂತೆ ಸಾಕಷ್ಟು ಹಗರಣಗಳ ತನಿಖೆ ಮಾಡುವಲ್ಲಿ ರಾಜ್ಯದ ಎಸ್ಐಟಿ ವಿಫಲವಾಗುತ್ತಿದೆ. ಸರ್ಕಾರ ದ ಕೈಗೊಂಬೆಯಾಗಿ ವರ್ತಿಸುತ್ತಿದೆ. ಹೀಗಾಗಿ ಕೇಂದ್ರ ತನಿಖಾ ದಳದಿಂದ ತನಿಖೆಯಾಗಲಿ ” ಎಂದು ಒತ್ತಾಯಿಸಿದರು.
ಹೆರಿಗೆ ಆದ್ಮೇಲೆ ಎಷ್ಟು ದಿನಗಳ ನಂತರ ʼʼಸೆಕ್ಸ್ʼʼ ಮಾಡಬಹುದು..? ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ
ಮುಡಾ ಹಗರಣದಲ್ಲಿಯಾರು ಭಾಗಿಯಾಗಿದ್ದಾರೆ. ಅವರೆಲ್ಲರನ್ನೂ ಪಕ್ಷಾತೀತವಾಗಿ, ಪಾರದರ್ಶಕವಾಗಿ ವಿಚಾರಣೆಗೊಳಪಡಿಸಿ ತನಿಖೆ ನಡೆಸಬೇಕು. ಸಿಎಂ ಸಿದ್ದರಾಮಯ್ಯ ಅದು ಬಿಜೆಪಿ ಅವಧಿಯಲ್ಲಿಆಗಿರುವುದು ಎಂದು ಹೇಳುತ್ತಿರುವುದು ಸರಿಯಾದ ಕ್ರಮವಲ್ಲಎಂದರು. ವಿಧಾನಸೌಧದ ಮುಂಭಾಗ 25 ಅಡಿ ಉದ್ದದ ಭುವನೇಶ್ವರಿ ಪ್ರತಿಮೆ ಸ್ಥಾಪಿಸಿರುವುದು ಮೌಢ್ಯದ ಪ್ರತೀಕ. ಇದು ವೈಜ್ಞಾನಿಕ ಮನಸ್ಥಿತಿಯನ್ನು ಹೋಗಲಾಡಿಸುವ ಪ್ರಯತ್ನ. ಇದನ್ನು ಎಲ್ಲರೂ ಖಂಡಿಸಬೇಕು.
ರಾಜ್ಯದ ಕುರಿ ಕಳ್ಳತನ ಹೆಚ್ಚುತ್ತಿರುವ ಕಾರಣ ಕುರಿಗಾಹಿಗಳಿಗೆ ಬಂದೂಕು ವಿತರಣೆ ಮಾಡುವ ಕುರಿತು ಸರ್ಕಾರ ಬಹಳ ದಿನಗಳಿಂದ ಚಿಂತನೆ ನಡೆಸುತ್ತಿದೆ. ಇದೂ ಸರಿಯಾದ ಕ್ರಮವಲ್ಲ. ಇದು ಸಮಾಜದ ಶಾಂತಿ, ಸುರಕ್ಷತೆಗೆ ಹಾನಿಕಾರಕ. ಇದಕ್ಕೆ ಬದಲಾಗಿ ಪೊಲೀಸ್ ವ್ಯವಸ್ಥೆಯಲ್ಲಿಸುಧಾರಣೆ ಮಾಡಬೇಕು. ನೀವು ಬಂದೂಕು ಕೊಡುತ್ತಿರುವುದು ರಕ್ಷಣೆಗೆ ಅಲ್ಲ. ಮನುಷ್ಯರ ನಡುವಿನ ಸಂಘರ್ಷಕ್ಕೆ ದಾರಿಯಾಗಲಿದೆ ಎಂದು ಹೇಳಿದರು.