ಚಿತ್ರದುರ್ಗ:- ರಾಜ್ಯದಲ್ಲಿ 15 ಸಾವಿರ ಹುದ್ದೆ ಖಾಲಿ ಇದ್ದು, ಭರ್ತಿ ಮಾಡುವ ಚಿಂತನೆ ನಡೆದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, PSI ಹಗರಣದಿಂದ ಗೊಂದಲ ಉಂಟಾಗಿದ್ದು. ಮರು ಪರೀಕ್ಷೆಗೆ ಈಗಾಗಲೇ ಸಿದ್ದತೆ ನಡೆದಿದೆ. 1000 PSI ಹಂತ ಹಂತವಾಗಿ ನೇಮಕಕ್ಕೆ ಸರ್ಕಾರ ಸಿದ್ದವಿದೆ. 3000 ಸಾವಿರ ಪೊಲೀಸ್ ಪೇದೆ ಹುದ್ದೆಗೆ ನೇಮಕಾತಿಗೆ ತಯಾರಿ ನಡೆಸುತ್ತಿದ್ದೇವೆ. DCRE ಸೆಲ್ ಗಳಿಗೆ ನಾವು ದೂರು ಸ್ವೀಕರಿಸಲು ಅಧಿಕಾರ ನೀಡಿದ್ದೇವೆ ಎಂದರು.

ಇನ್ನೂ ಮುರುಘಾ ಶ್ರೀ ಕೇಸ್ ವಿಚಾರವಾಗಿ ಮಾತನಾಡಿ, ಕೋರ್ಟ್ ಆದೇಶ ಏನೂ ಬಂದಿದೆ, ಚಾಚು ತಪ್ಪದೇ ಪಾಲಿಸುತ್ತೇವೆ. ಕೋರ್ಟ್ ನಲ್ಲಿ ವಿಷಯ ಇರುವುದರಿಂದ ಕೋರ್ಟ್ ಆದೇಶದಂತೆ ನಡೆದುಕೊಳ್ಳುತ್ತೇವೆ ಎಂದರು.
CM ಪಟಾಲಂ ನನ್ನ ಕಳ್ಳನಾಗಿ ಮಾಡುತ್ತಿದ್ದಾರೆ ಎಂಬ HDK ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಆಗಿ ಎರಡು ಬಾರಿ HDK ಕೆಲಸ ಮಾಡಿದ್ದಾರೆ. ಟೀಕೆ ಟಿಪ್ಪಣಿ ಮಾಡಲಿ ನಾವು ಬೇಡ ಎಂದು ಹೇಳಲ್ಲ. ಸಲಹೆ ಬೇಕು ನೀಡಲಿ, ಸುಖಾ ಸುಮ್ಮನೆ ನಮ್ಮ ಪ್ರತಿಕ್ರಿಯೆ ಇರಲ್ಲ ಎಂದರು.
ಇನ್ನೂ ಗ್ಯಾರಂಟಿ ಯೋಜನೆ ಅರೆಬೆಂದ ಯೋಜನೆ ಎಂಬ ವಿಜಯೇಂದ್ರ ಹೇಳಿಕೆ ವಿಚಾರವಾಗಿ ಮಾತನಾಡಿ, ಸಾವಿರಾರು ಕೋಟಿ ಜನರಿಗೆ ನಾವು ನೀಡಿದ್ದೇವೆ. ಅನ್ನಭಾಗ್ಯ, ಗೃಹಲಕ್ಷ್ಮಿ ನೇರವಾಗಿ ಜನರಿಗೆ ನೀಡಿದ್ದೇವೆ. ನಮ್ಮ ರಾಜಕೀಯ ನಾಯಕರ ಸರ್ಟಿಫಿಕೇಟ್ ಬೇಕಾಗಿಲ್ಲ. ಸಮುದಾಯದ ಸರ್ಟಿಫಿಕೇಟ್ ನೀಡಿದ್ದಾರೆ, ಮುಂದೆಯೂ ನೀಡುತ್ತಾರೆ ಎಂದರು.
ತೆಲಂಗಾಣದಲ್ಲಿ ಜಮೀರ್ ಹೇಳಿಕೆ ವಿಚಾರವಾಗಿ ಮಾತನಾಡಿ, ಜಮೀರ್ ಏನೂ ಹೇಳಿದ್ದಾರೆ ನನಗೆ ಗೊತ್ತಿಲ್ಲ. ಅದನ್ನ ತಿಳಿದುಕೊಂಡು ನಾನು ಪ್ರತಿಕ್ರಿಯೆ ನೀಡುತ್ತೇವೆ ಎಂದರು.

