ಬೆಂಗಳೂರು: ಮುಂಗಾರು ಪೂರ್ವ ಉತ್ತಮ ಮಳೆಯಿಂದಾಗಿ ಉತ್ಸಾಹದಿಂದ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ರೈತರಿಗೆ ಸಕಾಲಿಕವಾಗಿ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಮತ್ತು ಗೊಬ್ಬರ ಪೂರೈಕೆ ಮಾಡುವುದಾಗಿ ಸರ್ಕಾರ ಅಭಯ ನೀಡಿದೆ. ಬೇಡಿಕೆಗಿಂತ ಹೆಚ್ಚು ಬಿತ್ತನೆ ಬೀಜ ದಾಸ್ತಾನಿದ್ದು, ರಸಗೊಬ್ಬರ ಕೊರತೆಯೂ ಇಲ್ಲ. ಅಗತ್ಯ ಪ್ರಮಾಣದಲ್ಲಿ ಪ್ರಮಾಣೀಕೃತ ಬೀಜ ಪೂರೈಕೆಗೆ ಎಲ್ಲ ತಯಾರಿ ಮಾಡಿ ಕೊಳ್ಳಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
Water After Tea: ಟೀ ಕುಡಿದ ನಂತ್ರ ನೀರು ಕುಡಿಯುತ್ತೀರಾ..? ಮೊದಲು ನಿಲ್ಲಿಸಿ – ಈ ಸ್ಟೋರಿ ನೋಡಿ
ಬಿತ್ತನೆ ಬೀಜ ಮತ್ತು ಗೊಬ್ಬರ ವಿತರಣೆ ಕಾರ್ಯ ಆರಂಭಗೊಂಡ ಹಿನ್ನೆಲೆಯಲ್ಲಿಹಾವೇರಿಯಲ್ಲಿಒಂದೇ ಬಾರಿಗೆ ದೊಡ್ಡ ಸಂಖ್ಯೆಯಲ್ಲಿರೈತರು ಗುಂಪುಗೂಡಿದ ಕಾರಣ ಗೊಂದಲ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿಸಿಎಂ ಸೂಚನೆಯಂತೆ ಕೃಷಿ ಸಚಿವರು ಬುಧವಾರ ವಿಕಾಸಸೌಧ ಕಚೇರಿಯಲ್ಲಿಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ರಾಜ್ಯದ ನಾನಾ ಭಾಗಗಳ ಜಂಟಿ ನಿರ್ದೇಶಕರೊಂದಿಗೆ ವಿಡಿಯೊ ಸಂವಾದದ ಮೂಲಕ ಮಾಹಿತಿ ಪಡೆದುಕೊಂಡರು.