ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಬೀದಿ ದನಗಳ ಉಪಟಳ ಹೆಚ್ಚಾಗುತ್ತಿದ್ದು, ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ಬೀದಿದನಗಳ ಹಾವಳಿಯಿಂದಾಗಿ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪಘಾತಗಳ ಸಂಖ್ಯೆ ಹೆಚ್ಚಳ ಆಗುತ್ತಿದೆ. ಕೋರಮಂಗಲದ ಸರ್ಜಾಪುರ ಮುಖ್ಯ ರಸ್ತೆಯ ಮಧ್ಯದಲ್ಲೆ ಬೀದಾಡಿ ದನಗಳು ಕುಳಿತುಕೊಂಡಿರುತ್ತವೆ. ಇದರಿಂದ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ. ಹೀಗಿದ್ದರು. ಕೂಡ ಪಾಲಿಕೆ ಅಧಿಕಾರಿಗಳು ಬೀದಿ ದನಗಳ ಕಂಟ್ರೊಲ್ ಮಾಡುತ್ತಿಲ್ಲ ಎಂದು ಆಟೋ ಚಾಲಕ ಸೋಮಶೇಖರ್ ಎಂಬುವವರು ಆಕ್ರೋಶ ಹೊರ ಹಾಕಿದ್ದಾರೆ.
ಪಿಕ್ ಅವರ್ ಸಂದರ್ಭದಲ್ಲಿ ದಾರಿಗೆ ಅಡ್ಡಲಾಗಿ ಬರುವ ದನಗಳಿಂದ ಟ್ರಾಫಿಕ್ ಜಾಮ್ ಉಂಟಾದರೆ ಮತ್ತೊಂದೆಡೆಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು ರಸ್ತೆಯಲ್ಲಿ ಓಡಾಡಬೇಕೆಂದರು ದನಗಳ ಭಯ ಪಡುತ್ತಾರೆ ಯಾವಾಗ ಬಂದು ಗುದ್ದುತ್ತವೆ, ಏನು ಮಾಡ್ತವೆ ಅಂತ ಗೊತ್ತಾಗಲ್ಲ.
ಬೀದಿ ದನಗಳನ್ನ ಗೋಶಾಲೆಗೆ ಬಿಡಬೇಕು. ಈ ಕೆಲಸ ಪಾಲಿಕೆ ಅಧಿಕಾರಿಗಳು ಮಾಡಬೇಕು ಆದರೆ ಅವರು ಮಾಡ್ತಿಲ್ಲ. ಇದರಿಂದಾಗಿ ವಾಹನ ಸವಾರರ ಓಡಾಟಕ್ಕೆ ತುಂಬಾ ತೊಂದರೆ ಆಗುತ್ತೆ ಹೀಗಾಗಿ ಬೀದಿ ದನಗಳ ನಿಯಂತ್ರಣ ಮಾಡಲೆಬೇಕು ಎಂದು ವಾಹನ ಸವಾರರು ಹೇಳಿದ್ದಾರೆ.
ಇನ್ನಾದರು ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಂಡು ಬೀದಿ ದನಗಳ ಉಪಟಳಕ್ಕೆ ಬ್ರೇಕ್ ಹಾಕಲು ಮುಂದಾಗುತ್ತಾರಾ ಕಾದು ನೋಡಬೇಕಾಗಿದೆ.