ಕರ್ನಾಟಕ ರಾಜ್ಯದಲ್ಲಿ ರಣಕೆಕೆ ಹಾಕುತ್ತಿರುವ ಡೆಂಗಿ ಜ್ವರ ದಿನದಿಂದ ದಿನಕ್ಕೆ ಡೆಂಗಿ ಜ್ವರದಿಂದ ಸಾವಿನ ಪ್ರಕರಣ ಹೆಚ್ಚಾಗುತ್ತಲೇ ಇದೆ. ಡೆಂಗಿ ಚಿಕನ್ ಗುನ್ಯಾ ನಿಯಂತ್ರಣಕ್ಕೆ ಇಂದು ಬೆಳ್ಳಂಬೆಳಗ್ಗೆ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲಿಸಿದರು.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ನಗರದ ಹಳ್ಳ ಕೊಳ್ಳಗಳಲ್ಲಿ ಗಲೀಜು ಆಗದಂತೆ ಅಧಿಕಾರಿಗಳಿಗೆ ನೋಡಿಕೊಳ್ಳಲು ಸೂಚಿಸಿದರು. ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತಲಿನ ಜಾಗದಲ್ಲಿ ಗಲೀಜು ನೀರು ಮತ್ತು ತಿಳಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಿ
ಜ್ವರ ಬಂದರೆ ನಿರ್ಲಕ್ಷ್ಯ ಮಾಡದೆ ವೈದ್ಯರ ಸಲಹೆಯನ್ನು ಪಡೆದುಕೊಂಡು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ. ಈಗಾಗಲೇ ಡೆಂಗಿ ಜ್ವರ ಮತ್ತು ಚಿಕನ್ ಗುನ್ಯಾ ನಿಯಂತ್ರಣಕ್ಕೆ ರಬಕವಿ ಬನಹಟ್ಟಿ ತಾಲೂಕ ಆಡಳಿತ ಮತ್ತು ನಗರಸಭೆ ಹಾಗೂ ರಬಕವಿ ಬನಹಟ್ಟಿ ಆರೋಗ್ಯ ಕೇಂದ್ರದ ವೈದ್ಯರು ಎಲ್ಲಾ ಎಲ್ಲಾ ರೀತಿಯಿಂದಲೂ ಸಿದ್ಧತೆ ಮಾಡಿಕೊಳ್ಳಲಾಗಿದೆ ಆತಂಕ ಪಡುವ ಅಗತ್ಯವಿಲ್ಲ ಸ್ವಲ್ಪ ಜಾಗೃತವಹಿಸಿ ಎಂದು ರಬಕವಿ ಬನಹಟ್ಟಿ ತಹಶೀಲ್ದಾರ ಗಿರೀಶ್ ಸ್ವಾದಿ ಹೇಳಿದರು.
ಇದೇ ಸಂದರ್ಭದಲ್ಲಿ ರಬಕವಿ ಬನಹಟ್ಟಿ ನಗರ ಸಭೆಯ ಪೌರಾಯುಕ್ತಕರು ಜಗದೀಶ್ ಈಟಿ. ನಗರಸಭಾ ಸದಸ್ಯ ಸಂಜಯ್ ತೆಗ್ಗಿ. ಯುನುಸ ಚೌಲಗಿ. ರವಿ ಕೊರತೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಕಾಶ ಕುಂಬಾರ
ಬಾಗಲಕೋಟೆ