ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತಹಶೀಲ್ದಾರ ಕಾರ್ಯಾಲಯದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆ ಹಾಗೂ ವಿವಿಧ ಬೇಡಿಕೆಗೆ ಆಗ್ರಹಿಸಿ ಅನಿರ್ದಿಷ್ಟ ಅವಧಿಗೆ ಮುಷ್ಕರ ನಡೆಸಿದರು. ನಂತರ ರಬಕವಿ ಬನಹಟ್ಟಿ ತಹಶೀಲ್ದಾರ ಗಿರೀಶ್ ಸ್ವಾಧಿ ಅವರಿಗೆ ಮನವಿಯನ್ನು ಸಲ್ಲಿಸಿದರು. ಗ್ರಾಮ ಆಡಳಿತ ಅಧಿಕಾರಿಗಳ ಮೂಲಭೂತ ಸೌಲಭ್ಯವನ್ನು ಕಲ್ಪಿಸಿ ಕೂಡಿ.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಅಲ್ಮೆರಾ ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್ ಸಿ ಯು ಜಿ ಸಿಮ್ ಮತ್ತು ಡೇಟಾ ಗೂಗಲ್ ಕ್ರೋಮ್ ಬುಕ್ ಲ್ಯಾಪ್ ಟಾಪ್ ಪ್ರಿಂಟರ್ ಹಾಗೂ ಸ್ಕ್ಯಾನರ್ಗಳನ್ನ ಒದಗಿಸಿ ಕೊಡಿ ಇದನ್ನೇ ಯಾವುದೇ ಕೊಡದೆ ಕೆಲಸ ಮಾಡುವ ಎಂದರೆ ಹೇಗೆ ಮಾಡಲು ಸಾಧ್ಯ ಕೂಡಲೆ ಸರ್ಕಾರ ಮನ ಗಂಡು ನಮಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಿ.
ಮೊಬೈಲ್ ತಂತ್ರಾಂಶಗಳ ಕೆಲಸ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಿ. ಕೆ ಸಿ ಎಸ್ ಆರ್ ನೇಯಮಾವಳಿ ಗಳಂತೆ ಸರ್ಕಾರಿ ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮಮೊ ಹಾಕದಿರಲು ಹಾಗೂ ಮೆಮೋ ಹಾಕುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜಗಿಸುವಂತೆ ಸರ್ಕಾರ ಸುತ್ತೋಲೆ ಹೊರಡಿಸಿ. ಕರ್ನಾಟಕ ಉಚ್ಚನ್ಯಾಯಾಲಯದ ರಿಟ್ ಪಿಟಿಷನ್ ಸಂಖ್ಯೆ 329/ 23 ರ ಅಂತಿಮ ತೀರ್ಪಿಗೆ ಒಳಪಡಿಸಿ ರಾಜ್ಯದಾದಂತ ಎಲ್ಲಾ ಜಿಲ್ಲೆಗಳಲ್ಲಿ ಖಾಲಿ ಇರುವ ಪ್ರ.ದ. ಸ/ರಾ.ನಿ. ಹುದ್ದೆಗಳಿಗೆ ತಕ್ಷಣವೇ ಪದೊನ್ನತಿ ನೀಡಲು ಕಂದಾಯ ಸಚಿವರು ಕ್ರಮ ಜರುಗಿಸಬೇಕು
ಗ್ರಾಮ ಆಡಳಿತ ಅಧಿಕಾರಿಗಳು ಸರ್ಕಾರದ ಅಧೀನದಲ್ಲಿ ಪ್ರಾಮಾಣಿಕ ಕೆಲಸವನ್ನು ನಿರ್ವಹಿಸುತ್ತಿದೆ ಬರಗಾಲ
ಸಂದರ್ಭದಲ್ಲಿ ಮತ್ತು ಪ್ರವಾಹ ಬೆಳೆ ಸಮೀಕ್ಷೆ ಹೀಗೆ ಹಲವಾರು ಸಾರ್ವಜನಿಕರಿಗೆ ಅನುಕೂಲವಾಗುವ ಕೆಲಸಗಳನ್ನು ನಮ್ಮ ಅಧಿಕಾರಿಗಳು ಮಾಡುತ್ತಾರೆ ಅವರ ಮೇಲೆ ನಿರಂತರ ಹಲ್ಲೆಗಳು ಕೂಡ ನಡಿತಾ ಇದೆ ಇದರ ಬಗ್ಗೆ ಸರ್ಕಾರ ಕೂಡಲೇ ನಮ್ಮ ಗ್ರಾಮ ಆಡಳಿತ ಅಧಿಕಾರಿಗಳಿಗೂ ಭದ್ರತೆ ನೀಡಿ ಮತ್ತು ನಮಗೆ ಸುರಕ್ಷಿತವಾದ ಕಟ್ಟಡಗಳನ್ನ ನಿರ್ಮಿಸಿ ಸಾರ್ವಜನಿಕರ ಕೆಲಸ ಮಾಡಲು ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಹೇಳಿಕೆಗಳನ್ನು ಕರ್ನಾಟಕ ರಾಜ್ಯ ಸರ್ಕಾರ ಮುಖ್ಯಮಂತ್ರಿಗಳ
ಸಿದ್ದರಾಮಯ್ಯ ಮತ್ತು ಕಂದಾಯ ಸಚಿವರು ಕೃಷ್ಣ ಬೈರೇಗೌಡರು ನಮ್ಮ ಮನವಿಯನ್ನ ಪರಿಶೀಲನೆ ಮಾಡಿ ನಮಗೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕೆಂದು ಕರ್ನಾಟಕ ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷರಾದ ಮಲ್ಲಿಕಾರ್ಜುನ ಕವಟಗೊಪ ಹೇಳಿದರು.ಇದೇ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಾದ ರಾಚಯ್ಯ ಮಠಪತಿ ತಾಲೂಕ ಗ್ರಾಮ ಆಡಳಿತ ಅಧ್ಯಕ್ಷರು. ಮಂಜು ನೀಲನ್ನವರ. ಸದಾಶಿವ ಕುಂಬಾರ. ಅರಭಾಜಿ ಜಮಖಂಡಿ. ಸೌರಬ ಮೈತ್ರಿ. ಈರೇಶ ಗೋಕಾಕ. ರೇವಣಸಿದ್ದಪ್ಪ ಕಮಟಿ. ತ್ರಿವೇಣಿ ದೇವರ ಮನೆ. ಬಿರಾದಾರ. ಎಸ್ ಜಮಾದಾರ. ಎಸ್ ಎಂ ಹೊಸಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಕಾಶ ಕುಂಬಾರ
ಬಾಗಲಕೋಟೆ