ಸ್ಕೇಟಿಂಗ್ ಮಾಡುವ ಮೂಲಕ ಸ್ವಚ್ಚತೆ ಕುರಿತು ವಿದ್ಯಾರ್ಥಿಗಳು ಮುದ್ದೇಬಿಹಾಳ ಪಟ್ಟಣದಲ್ಲಿ ಜಾಗೃತಿ ಮೂಡಿಸಿದರು. ಸ್ವಚ್ಛ ಭಾರತ್ ಮಿಷನ್, ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು ಹಾಗೂ ಮುದ್ದೇಬಿಹಾಳ ಪುರಸಭೆ ಕಾರ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ,
ಸ್ವಚ್ಛತಾ ಸೇವಾ 2024 ಇದರ ಪ್ರಯುಕ್ತವಾಗಿ ಮುದ್ದೇಬಿಹಾಳ ಪಟ್ಟಣದ ಏಕಲವ್ಯ ರೋಲರ್ ಸ್ಕೇಟಿಂಗ್ ಅಕಾಡೆಮಿ ವಿದ್ಯಾರ್ಥಿಗಳು ಸ್ಕೇಟಿಂಗ್ ಶೂ ಧರಿಸಿಕೊಂಡು ಪ್ರಮುಖ ರಸ್ತೆಯಲ್ಲಿ ಕರ ಪತ್ರ ನೀಡುವ ಮುಖಾಂತರ ಪುರಸಭೆ ಸ್ವಚ್ಛತಾ ಈ ಸೇವಾ ಅಭಿಯಾಗಿ ಜನರಿಗೆ ಸ್ವಚ್ಚತೆಯ ಕುರಿತು ಜಾಗೃತಿ ಮಂಡಿಸಿದರು.
Pitru Paksha 2024: ಪಿತೃಪಕ್ಷದಲ್ಲಿ ಅಪ್ಪಿ ತಪ್ಪಿಯೂ ಈ ತಪ್ಪುಗಳ ಮಾಡಬೇಡಿ..! ಪಿತೃ ದೋಷ ಬರುತ್ತೆ!
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಮಹಿಬೂಬ್ ಗೊಳಸಂಗಿ, ಪುರಸಭೆಯ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕರಾಟೆ ಶಿಕ್ಷಕ ಶಿವಕುಮಾರ ಶಾರದಳ್ಳಿ, ಮಾಂತೇಶ್ ಕಟ್ಟಿಮನಿ ಸೇರಿದಂತೆ ಹಲವರು ಭಾಗಿಯಾಗಿದ್ದರು.