ಹುಬ್ಬಳ್ಳಿ :- ಜೆಡಿಎಸ್ ಕೋರ್ ಕಮಿಟಿ ರಾಜ್ಯಾಧ್ಯಕ್ಷ ಜಿ.ಟಿ ದೇವೇಗೌಡ ಹೊಸ ಬಾಂಬ್ ಸಿಡಿಸಿದ್ದು, ಮಂಡ್ಯ ಸಂಸದೆ ಸುಮಲತಾ ಕಾಂಗ್ರೆಸ್ ಸೇರ್ತಾರೆ ಎಂದು ಹೇಳಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಗೆ ಸುಮಲತಾ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿದ್ರೆ, ನಾವು ಬೆಂಬಲ ನೀಡುತ್ತೇವೆ. ಆದ್ರೆ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ
ಸುಮಲತಾ ಕಾಂಗ್ರೆಸ್ ಸೇರಿದರೆ ನಮ್ಮ ಬೆಂಬಲ ಇಲ್ಲ. ಸುಮಲತಾ ಪರವಾಗಿ ಟಿಕೆಟ್ ಕೇಳಿದ ನಾರಾಯಣಗೌಡ ಇದೀಗ ಸಿದ್ದರಾಮಯ್ಯ ಮನೇಲಿ ಕೂತಿದ್ದಾರೆ. ಹೀಗಾಗಿ ಸುಮಲತಾ ಕಾಂಗ್ರೆಸ್ಗೆ ಹೋಗಬಹುದು ಎಂದು ಹೇಳಿದ್ದಾರೆ.
ಇನ್ನೂ ಈ ಬಾರಿ ದೇವೇಗೌಡರ ಕುಟುಂಬದ ಇಬ್ಬರು ಸ್ಪರ್ಧೆ ಮಾಡ್ತಾರೆ. ಕುಮಾರಸ್ವಾಮಿ ಮತ್ತು ಪ್ರಜ್ವಲ್ ರೇವಣ್ಣ ಇಬ್ಬರು ಅಭ್ಯರ್ಥಿಗಳಾಗಬಹುದು. ಬಿಜೆಪಿ – ಜೆಡಿಎಸ್ ಮೈತ್ರಿಯಲ್ಲಿ ನಾವು 6 ರಿಂದ 8 ಕ್ಷೇತ್ರ ಕೇಳಿದ್ದೇವೆ ತುಮಕೂರು, ಹಾಸನ, ಮಂಡ್ಯ, ಮೈಸೂರು, ಕೋಲಾರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಕ್ಷೇತ್ರ ಕೇಳಿದ್ದೇವೆ ಎಂದು ತಿಳಿಸಿದ್ದಾರೆ.