ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದ ಸುಮಲತಾ ಅಂಬರೀಶ್, ಈ ಬಾರಿ ಕಮಲ ಚಿಹ್ನೆ ಅಡಿಯಲ್ಲಿಯೇ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಬಿಜೆಪಿಯ ಟಿಕೆಟ್ಗಾಗಿ ಹೈಕಮಾಂಡ್ ಮಟ್ಟದಲ್ಲಿಯೂ ಸುಮಲತಾ ಅಂಬರೀಶ್ ಲಾಬಿ ಸಹ ಮಾಡಿದ್ದರು. ನೇರವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನೇ ಭೇಟಿಯಾಗಿ ಚರ್ಚೆ ನಡೆಸಿದ್ದರು.
ಜೆಪಿ ನಗರ ನಿವಾಸದ ಬಳಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಸುಮಲತಾ ಅಂಬರೀಶ್, ಎಲ್ಲಿಯೂ ಮುಂದಿನ ನಡೆ ಏನು ಎಂಬುದರ ಗುಟ್ಟನ್ನು ಬಿಟ್ಟುಕೊಡಲಿಲ್ಲ. ಏಪ್ರಿಲ್ 3ರಂದು ಮಂಡ್ಯಕ್ಕೆ ಬಂದು, ಅಲ್ಲಿಯೇ ಚರ್ಚಿಸಿ ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ಹೇಳಿದರು.
![Demo](https://ainlivenews.com/wp-content/uploads/2023/12/spoorthi-1.jpg)
ಈ ಬಗ್ಗೆ ಇಂದು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ತಮ್ಮ ಮುಂದಿನ ನಡೆ ಏನು ಎಂದು ಬರೆದುಕೊಂಡಿದ್ದಾರೆ . ನಾಳೆ ಬೆಳಗ್ಗೆ 10.30ಕ್ಕೆ ನನ್ನ ನಿರ್ಧಾರ ತಿಳಿಸುತ್ತೇನೆ ನಿಮ್ಮ ನಡೆಯೇ ನನ್ನ ನಡೆ ಎಂದು ಬರೆದುಕೊಂಡಿದ್ದಾರೆ.
https://www.facebook.com/share/p/oJ5zsLesVA9d1uKS/?mibextid=qi2Omg
ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ.
ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ.
2nd Pu Result Date: ದ್ವಿತೀಯ ಪಿಯು ಫಲಿತಾಂಶಕ್ಕೆ ಮುಹೂರ್ತ ಫಿಕ್ಸ್!
ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ.
ನಾಳೆ (ಏಪ್ರಿಲ್ 3) ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟ ಪಡಿಸುವ ಹಾಗೂ ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ಅಂದು ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ ಎಂದು ಬರೆದುಕೊಂಡಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)