ಬೆಂಗಳೂರು: ಮಂಡ್ಯ ಟಿಕೆಟ್ ಜೆಡಿಎಸ್ ಪಾಲಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿಯೇ ಅಖಾಡಕ್ಕೆ ಧುಮುಕುತ್ತಿದ್ದು ರಣಕಣ ನಿಗಿ ನಿಗಿ ಎನ್ನುತ್ತಿದೆ.. ಮಂಡ್ಯದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಬಳಿಕ ಮೌನಕ್ಕೆ ಶರಣಾಗಿದ್ದ ಸುಮಲತಾ ಅಂಬರೀಶ್ ಅವರು ಮಂಡು ಬೆಂಬಲಿಗರ ಜೊತೆ ಸಭೆ ನಡೆಸಿದ್ದಾರೆ.
Lok Sabha Election 2024: ಕರ್ನಾಟಕದಲ್ಲಿ ಚುನಾವಣೆ ನಡೆಯುವ ದಿನ ಸಾರ್ವತ್ರಿಕ ರಜೆ ಘೋಷಣೆ!
ಅಂಬರೀಶ್ ಬೆಂಬಲಿಗರು, ಕಾರ್ಯಕರ್ತರ ಒತ್ತಾಯಕ್ಕೆ ಮಣಿದ ಸುಮಲತಾ ಅಂಬರೀಶ್ ಅವರು ಏಪ್ರಿಲ್ 3ರಂದು ಮಂಡ್ಯದಲ್ಲಿ ಸಭೆ ಮಾಡಿ ಅಲ್ಲೇ ಹೇಳುತ್ತೇನೆ ಎಂದು ತಮ್ಮ ದಿಟ್ಟ ನಿರ್ಧಾರವನ್ನು ಬೆಂಬಲಿಗರ ಮುಂದೆ ಇಟ್ಟಿದ್ದಾರೆ.
ಸುಮಲತಾ ಅಂಬರೀಶ್ ಅವರು ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿದ್ದು, ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಮಹತ್ವದ ಘೋಷಣೆ ಮಾಡಿದ್ದಾರೆ. ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಲು ಬೆಂಬಲಿಗರು ಒತ್ತಾಯಿಸಿದ್ದಾರೆ.
ಕಾರ್ಯಕರ್ತರು, ಬೆಂಬಲಿಗರನ್ನು ಉದ್ದೇಶಿಸಿ ಸಂಸದ ಸುಮಲತಾ ಅಂಬರೀಶ್ ಅವರು ಮಾತನಾಡಿದ್ದಾರೆ. ನನ್ನ ಹಾಗೂ ಅಂಬರೀಶ್ ಅಭಿಮಾನಿಗಳಿಗೆ 5 ವರ್ಷದ ರಾಜಕೀಯ ಜೀವನ ನೀಡಿದ್ದು ಮಂಡ್ಯದ ಜನ. ಇಂದು ನನ್ನ ಜೊತೆಯಲ್ಲಿ, ಅಂಬರೀಶ್ ರಾಜಕೀಯ ಜೀವನದ ಮೊದಲ ದಿನದಂದು ಇಂದಿನವರೆಗೂ ಇರುವ ಎಲ್ಲರಿಗೂ ಧನ್ಯವಾದಗಳನ್ನ ತಿಳಿಸಿದ್ದಾರೆ.
ಕಳೆದ 5 ವರ್ಷದಲ್ಲಿ ಕಣ್ಣೀರು ಹಾಕಿದ ದಿನಗಳು ಇದೆ. ನಾನು ಸ್ವಾರ್ಥದಿಂದ ನನ್ನ ಹೆಜ್ಜೆ ಹಾಕಿಕೊಳ್ಳಬಹುದಿತ್ತು. ರಾಜಕೀಯದಲ್ಲಿ ನನ್ನ ಸ್ವಾರ್ಥ ಇರಬೇಕು ಅಂದಿದ್ರೆ, ನಾನು ಬೇರೆ ಮಾರ್ಗದಲ್ಲೇ ಹೋಗುತ್ತಿದೆ. ನಾನು ನನ್ನ ಮಗ ಆರಾಮವಾಗಿ ಇರಬಹುದಿತ್ತು. ಆದರೆ ನಾನು ನಿಮಗೆ ಕೊಟ್ಟಿರುವ ವಾಗ್ದಾನ ಮೀರಿಲ್ಲ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.